ಸರಕು ತುಂಬಿದ ಲಾರಿ ಭೀಕರ ಅಪಘಾತ : ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚುತ್ತಿರುವ ಅಪಘಾತ
ಕೊಟ್ಟಿಗೆಹಾರ: ಪ್ಲೈವುಡ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಈ ಭಾಗಗಳಲ್ಲಿ ಈ ಪ್ರದೇಶಗಳಲ್ಲಿ ಮಂಜು ಕವಿದ ವಾತಾವರಣ ಹಾಗೂ ಆಗಾಗ ಮಳೆ ಬೀಳುತ್ತಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಈ ಕಾರಣದಿಂದಾಗಿ ವಾಹನಗಳ ಅಪಘಾತ ಹೆಚ್ಚು ಸಂಭವಿಸುತ್ತದೆ ನೆನ್ನೆ ರಾತ್ರಿ ಮೂಡಿಗೆರೆಯ ಸಾಮಿಲ್ ಎಂಬಲ್ಲಿ ಪ್ಲೈವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ರಾತ್ರಿಯೆಲ್ಲಾ ಪೊಲೀಸರು ಲಾರಿಯನ್ನು ಕಾಯುವ ಪರಿಸ್ಥಿತಿ ಉಂಟಾಗಿತ್ತು.
ಕೊಟ್ಟಿಗೆಹಾರ ಚಾರ್ಮುಡಿ ಘಾಟ್ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು ಚಾರ್ಮುಡಿ ಘಾಟ್ ನಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೆಟ್ ಅಳವಡಿಸಲಾಗಿದೆ ಹಾಗೂ ಪೋಲೀಸ್ ಭದ್ರತೆ ಹೆಚ್ಚಿಸಲಾಗಿದೆ.