136 ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ.
(KOLARA): ಬಂಗಾರಪೇಟೆ :ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಕಪೋಕಲ್ಪಿತ ಸೃಷ್ಟಿಯಾಗಿದ್ದು ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ದೃತಿಗೆಡುವ ಪ್ರಮೇಯವಿಲ್ಲ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಒಳಗೊಂಡಂತೆ 136 ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿದ್ದಾರೆ ಎಂದು ಕೆ ಯು ಐ ಡಿ ಎಫ್ ಸಿ ಅಧ್ಯಕ್ಷರು ಹಾಗೂ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಎಸ್ಎನ್ ಸಿಟಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಘನ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ಅಗತ್ಯವಿದೆ ಎಂದು ತಿಳಿಸಿದೆಯೇ ಹೊರತು ಪ್ರಾಸಿಕ್ಯೂಷನ್ ಗೆ ಅವಕಾಶ ನೀಡಲಿಲ್ಲ ,ಹಾಗೂ ಕಾಂಗ್ರೆಸ್ಸಿನ ಹೈಕಮಾಂಡ್ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ಸಚಿವರು ಮತ್ತು ಶಾಸಕರು ಸಿದ್ದರಾಮಯ್ಯನವರ ಪರವಾಗಿದ್ದೇವೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕೇವಲ ಮಾಧ್ಯಮಗಳ ಸುಳ್ಳು ಸುದ್ದಿ ಎಂದು ಕಿಡಿಕಾರಿದರು.
ರಾಜಭವನ ಮತ್ತು ತನಿಖಾ ಸಂಸ್ಥೆಗಳ ದುರುಪಯೋಗ:
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ರವರು ರಾಜಭವನವನ್ನು ಬಿಜೆಪಿ ಕಚೇರಿ ಯನ್ನಾಗಿಸಿಕೊಂಡು ರಾಜ್ಯಪಾಲರ ದಿಕ್ಕು ತಪ್ಪಿಸಿ ಅಧಿಕಾರ ದುರುಪಯೋಗ ಮಾಡಿಕೊಂಡು ಸಿದ್ದರಾಮಯ್ಯರವರ ಜನಪರ ಯೋಜನೆಗಳು ಏಳ್ಗೆಯನ್ನು ಸಹಿಸದೆ ರಾಜಕೀಯ ಷಡ್ಯಂತರ ರೂಪಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿದ್ದಾರೆ, ಇದರೊಟ್ಟಿಗೆ ತನೀಖಾ ಸಂಸ್ಥೆಗಳಾದ ಸಿಬಿಐ ಜಾರಿ ನಿರ್ದೇಶನಾಲಯ ಹಾಗೂ ನ್ಯಾಯಾಲಯವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ:
ಮುಡಾಹಗರಣದಲ್ಲಿ ಯಾವುದೇ ಸತ್ಯಾಂಶವಿಲ್ಲ. ಬಿಜೆಪಿ ಅಧಿಕಾರವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಆಡಳಿತದಲ್ಲಿ ಮತ್ತು ಜೆಡಿಎಸ್-ಬಿಜೆಪಿ ಸದಸ್ಯರನ್ನೊಳಗೊಂಡ ಮುಡಾ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆಯಾಗಿದೆ. ಈ ಹಂತದಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇರುವುದಿಲ್ಲ.ಈ ಹಿನ್ನೆಲೆಯಲ್ಲಿ ಉಚ್ಚನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು.
ಹರಿಯಾಣ ಒಳಗೊಂಡಂತೆ 5 ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಮೇಲೆ ಮೂಡಾ ಪ್ರಕರಣ ಯಾವುದೇ ವ್ಯತಿರೀಕ್ತ ಪರಿಣಾಮ ಬೀರುವುದ್ದಿಲ್ಲ, ರಾಷ್ಟ್ರ ವ್ಯಾಪಿ ಬಿಜೆಪಿ ವಿರೋಧಿ ಅಲೆಯಿದ್ದು ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಹಗರಣಗಳ ವಿರುದ್ಧ ಹೋರಾಟಕ್ಕೆ ಸಿದ್ದ:
ಅನಾಗತ್ಯವಾಗಿ ವಿರೋಧ ಪಕ್ಷದ ನಾಯಕರು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸಲು ಸುಳ್ಳು ಅಪಪ್ರಚಾರ ಮುಂದುವರೆಸಿದರೇ ಬಿಜೆಪಿ ಅಧಿಕಾರವಧಿಯಲ್ಲಿ ನಡೆದಂತ ಭೋವಿನಿಗಮ, ಕರೋನಾ, ದೇವರಾಜ್ ಅರಸು ಟರ್ಮಿನಲ್ ಒಳಗೊಂಡಂತೆ ಸಾವಿರಾರು ಕೋಟಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪಕ್ಷ ಬೀದಿಗೆ ಬಂದು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ವರದಿ: ವಿಷ್ಣು ಕೋಲಾರ