News & Updatesರಾಜ್ಯ

195 ಬರ ಪ್ರದೇಶಗಳ ಘೋಷಣೆ: ಕರ್ನಾಟಕ ಸರ್ಕಾರ 2023ರ ಬರ ತಾಲೂಕುಗಳ ಪಟ್ಟಿ ಬಿಡುಗಡೆ

195 ಬರ ಪ್ರದೇಶಗಳ ಘೋಷಣೆ: ಕರ್ನಾಟಕ ಸರ್ಕಾರ 2023ರ ಬರ ತಾಲೂಕುಗಳ ಪಟ್ಟಿ ಬಿಡುಗಡೆ

(ಬೆಂಗಳೂರು): 2023ರ ಮಳೆ ಸರಿಯಾಗಿ ಬಾರದೆ ಇದ್ದ ಕಾರಣಕ್ಕೆ ರಾಜ್ಯ ಸರ್ಕಾರ ಬರ ಪೀಡಿತ ಪ್ರದೇಶಗಳ ಪಟ್ಟಿ ಬಿಡುಗಡೆ ಮಾಡಿದೆ. ಅದೆ ರೀತಿ ಬಿಜೆಪಿ instagram ಅಕೌಂಟ್ ನಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ದೇಹವನ್ನು ರಾಜ್ಯಕ್ಕೆ ಬರ ಬಂದಂತೆ ಚಿತ್ರದ ಮೂಲಕ ಕರ್ನಾಟಕ ಬಿಜೆಪಿ ಅಕೌಂಟ್ instagram ನಲ್ಲಿ ಪೋಸ್ಟ್ ಮಾಡಿದ್ದೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಈಗ ರಾಜ್ಯಕ್ಕೇ ಬರ ತಂದ ತಾಲೂಕುಗಳ 2ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ.

2023ನೇ ಸಾಲಿನ ನೈಋತ್ಯ ಮುಂಗಾರು ರಾಜ್ಯಕ್ಕೆ ದಿನಾಂಕ: 08.06.2023 ರಂದು ಪ್ರವೇಶಿಸಿ ರಾಜ್ಯದ ಎಲ್ಲೆಡೆ 11 ದಿನಗಳಲ್ಲಿ ವ್ಯಾಪಿಸಿತು, ಮುಂಗಾರು ಪ್ರವೇಶ ಮತ್ತು ವ್ಯಾಪಿಸಲು ಸಾಮಾನ್ಯ ದಿನಾಂಕಕ್ಕಿಂತ ಒಂದು ವಾರ ತಡವಾಗಿದೆ. ಜೂನ್ ಮಾಹೆಯಲ್ಲಿ ಮುಂಗಾರು, ದುರ್ಬಲಗೊಂಡು ವಾಡಿಕೆಗಿಂತ ಶೇ.56% ಮಳೆ ಕೊರತೆ ಉಂಟಾಯಿತು ಜುಲೈ ಮಾಹೆಯಲ್ಲಿ ಮುಂಗಾರು ಚುರುಕುಗೊಂಡು ವಾಡಿಕೆಗಿಂತ ಶೇ.29% ಹೆಚ್ಚು ಮಳೆಯಾಗಿದ್ದು, ಈ ಮಳೆಯು ಕೇವಲ ಒಂದು ವಾರ ಮಾತ್ರ ಕೇಂದ್ರೀಕೃತವಾಗಿತ್ತು. ಆಗಸ್ಟ್ ಮಾಹೆಯಲ್ಲಿ ವಾಡಿಕೆಗಿಂತ ಶೇ.73% ಮಳೆ ಕೊರತೆಯಾಗಿದ್ದು, ಕಳೆದ 125 ವರ್ಷಗಳಲ್ಲಿ ಅತಿ ಕಡಿಮೆ ಮಳೆ ದಾಖಲಾಗಿರುವುದು ಕಂಡು ಬಂದಿರುತ್ತದೆ, ರಾಜ್ಯದ ಮಳೆ, ಬೆಳ ಜಲಾಶಯಗಳ ಸಂಗ್ರಹಣಾ ಅಂತರ್ಜಲ, ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತು. ಕಾಲಕಾಲಕ್ಕೆ ರಾಜ್ಯ ಹವಮಾನ ಅವಲೋಕನಾ ಸಮಿತಿಯು ಪರಿಶೀಲಿಸಿದೆ. ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ರಾಜ್ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರು ಅವಲೋಕಿಸಿರುತ್ತಾರೆ.

ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರನ್ವಯ ಕಡ್ಡಾಯ ಮತ್ತು ತತ್ಪರಿಣಾಮ ಸೂಚಕಗಳ ನಿರಂತರ ಮೇಲ್ವಿಚಾರಣೆಯ ಆಧಾರದ ಮೇಲೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರ ಕೇಂದ್ರ (KSNDMC) ದಿನಾಂಕ:01-06-2023 ರಿಂದ 19,08,202 ಅವಧಿಯ ವರದಿಯಂತೆ ರಾಜ್ಯದಲ್ಲಿ 487 ಮಿ.ಮಿ, ಮಳೆಯಾಗಿದ್ದು, ವಾಡಿಕೆ ಮಳೆ (635 ಮಿ.ಮಿ.)ಗೆ ಹೋಲಿಸಿದಾಗ ಶೇ.23% ರಷ್ಟು ಮಳೆ ಕೊರತೆ ಕಂಡು ಬಂದಿರುತ್ತದೆ. ಬರ ಕೈಪಿಡಿ-2020 ರ ಮಾರ್ಗಸೂಚಿಯನ್ವಯ ಬರ ಘೋಷಿಸಲು ಸೂಚಿಸಿರುವ ಕಡ್ಡಾಯ ಮಾನದಂಡಗಳಾದ ಶೇ.60%ಕ್ಕಿಂತ ಹೆಚ್ಚು ಮಳೆ ಕೊರತೆ ಅಥವಾ ಸತತ ಮೂರು ವಾರಗಳಲ್ಲಿ ಶುಷ್ಕ ವಾತಾವರಣ ಹಾಗೂ ತತ್ಪರಿಣಾಮ ಮಾನದಂಡಗಳಾದ ತೇವಾಂಶ ಕೊರತೆ ಉಪಗ್ರಹ ಆಧಾರಿತ ಬೆಳೆ ಸೂಚ್ಯಾಂಕ, ಬೆಳೆ ಬಿತ್ತನೆ ಪ್ರದೇಶ ಹಾಗೂ ಜಲಸಂಪನ್ಮೂಲ ಸೂಚ್ಯಾಂಕದಲ್ಲಿನ ತೀವ್ರತೆಯನ್ನು ಆಧರಿಸಿ ಮೌಲ್ಯಮಾಪನ ಮಾಡಿ ಒಟ್ಟಾರೆ 113 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ.

ದಿನಾಂಕ:22.08.2023 ರಂದು ನಡೆದ ಸಂಪುಟ ಉಪಸಮಿತಿಯ ಸಭೆಯು ಬರ ಕಪಿಡಿ-2020 ರ ಪ್ಯಾರಾ 3.2.6 ರ ನಿಬಂಧನೆಗಳನ್ವಯ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ಕೃಷಿ ತೋಟಗಾರಿಕೆ ಮತ್ತು ಕಂದಾಯ ಅಧಿಕಾರಿ/ ಇತರೆ ಸಿಬ್ಬಂದಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿ ಬರ ಪರಿಸ್ಥಿತಿ ಕಂಡುಬಂದ 113 ತಾಲೂಕುಗಳ 1519 ಗ್ರಾಮಗಳನ್ನು, Random ಆಗಿ ಗುರುತಿಸಿ ಇವುಗಳಲ್ಲಿನ ಒಟ್ಟು 14,228 ಪ್ಲಾಟ್‌ಗಳಲ್ಲಿ ಮೊಬೈಲ್ App ಮೂಲಕ ಬೆಳೆ ಹಾಸಿ ಕ್ಷೇತ್ರ ದೃಢೀಕರಣ (Ground Truthing)ನ್ನು ಕೈಗೊಂಡಿರುತ್ತಾರೆ. ಅದರಂತೆ ಮೇಲೆ (3)ರಲ್ಲಿ ಓದಲಾದ ದಿನಾಂಕ: 25,08,2023 ರಲ್ಲಿ ಸುತ್ತೋಲೆಯನ್ನು ಹೊರಡಿಸಿ ಬೆಳೆ ಸಮೀಕ್ಷೆ ನಡೆಸುವಂತೆ ತಿಳಿಸಿದ. ಅದರಂತೆ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟವಾಗಿರುವ 62 ತಾಲೂಕುಗಳನ್ನು ತೀವು ಬರ ಹಾಗೂ 33% -50%ರಷ್ಟು ಬೆಳೆ ನಷ್ಟವನ್ನು ವರದಿ ಮಾಡಿರುವ 51 ತಾಲ್ಲೂಕುಗಳು ಸಾಧಾರಣ ಬರ ಎಂದು ವರ್ಗೀಕರಿಸಲಾಗಿದೆ.

ದಿನಾಂಕ:1-6-2023 ರಿಂದ 02.09.2023 ಅವಧಿಯಲ್ಲಿ ರಾಜ್ಯದಲ್ಲಿ 512 ಮಿಮಿ ಮಳೆಯಾಗಿದ್ದು, ವಾಡಿಕೆ ಮಳೆ (701ಮಿಮಿಗೆ ಹೋಲಿಸಿದಾಗ ಶೇ.27%ರಷ್ಟು ಮಳೆಕೊರತೆ ಕಂಡು ಬಂದಿದೆ. ಬರ ಮಾನದಂಡಗಳನ್ನು ಪರಿಗಣಿಸಿ ಹೊಸದಾಗಿ 83 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿರುವ ತಾಲ್ಲೂಕುಗಳೆಂದು KSNDMC ಸಂಸ್ಥೆಯು ವರದಿ ನೀಡಿದೆ. ಈ ಬಗ್ಗೆ ದಿನಾಂಕ: 04-09-2023ರಂದು ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈಗಾಗಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಸಾಧಾರಣ ಬರವೆಂದು ಗುರುತಿಸಲಾದ 51 ತಾಲೂಕುಗಳ ಜೊತೆಗೆ ದಿನಾಂಕ: 02-9-2023 ವರದಿಯನುಸಾರ ರಾಜ್ಯದಲ್ಲಿ 83 ತಾಲೂಕುಗಳು ಸೇರಿ 134 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಕ್ಷೇತ್ರ ದೃಢೀಕರಣ (Ground Truthing) ಕೈಗೊಳ್ಳುವಂತೆ ಹಾಗೂ ಸದರಿ ಪ್ರಸ್ತಾವನೆಯ ಬಗ್ಗೆ ಸಚಿವ ಸಂಪುಟಕ್ಕೆ ಮಂಡಿಸುವಂತೆ ತೀರ್ಮಾನಿಸಲಾಯಿತು. ಅದರಂತೆ ಮೇಲೆ (3)ರಲ್ಲಿ ಓದಲಾದ ದಿನಾಂಕ: 04,09,2023 ರಲ್ಲಿ ಸುತ್ತೋಲೆಯನ್ನು ಹೊರಡಿಸಿ ಬೆಳೆ ಸಮೀಕ್ಷೆ ನಡೆಸುವಂತೆ ತಿಳಿಸಿದೆ.

ಮೇಲೆ (4)ರಲ್ಲಿ ಓದಲಾದ ದಿನಾಂಕ:07-09-2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ನೈರುತ್ಯ ಮುಂಗಾರಿನಲ್ಲಿ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿರುವ ಕುರಿತು ಸಚಿವ ಸಂಪುಟವು ದೀರ್ಘವಾಗಿ ಚರ್ಚಿಸಿ ಈಗಾಗಲೇ 62 ತಾಲೂಕುಗಳಲ್ಲಿ ನೀವು ಬರ ಎಂದು ಬೆಳೆ ಹಾನಿ ಸಮೀಕ್ಷೆಯಿಂದ ದೃಢಪಟ್ಟಿದ್ದು, ಇನ್ನು ಹೆಚ್ಚುವರಿಯಾಗಿ 134 ತಾಲ್ಲೂಕುಗಳಲ್ಲಿ, ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಅಧಿಕಾರಿ/ಇತರೆ ಸಿಬ್ಬಂದಿಗಳನ್ನು ಒಳಗೊಂಡ ತಂಡಗಳನ್ನು ರಚಿಸಿ ಒಟ್ಟು 134 ತಾಲ್ಲೂಕುಗಳಲ್ಲಿನ Random ಆಗಿ ಗುರುತಿಸಿ ಇವುಗಳಲ್ಲಿ ಒಟ್ಟು 19,075 ಪ್ಲಾಟ್‌ಗಳಲ್ಲಿ ಮೊಬೈಲ್ App ಮೂಲಕ ಬೆಳೆ ಹಾನಿ ಕ್ಷೇತ್ರ ದೃಢೀಕರಣ (Ground Truthing) ಕೈಗೊಂಡು ಸದರಿ ವರದಿ ಮುಂದಿನ ಕೆಲವು ದಿನಗಳಲ್ಲಿ ಬರುವುದರಿಂದ ನಂತರ ಬರ ಘೋಷಣೆಯ ಬಗ್ಗೆ ತೀರ್ಮಾನಿಸಲು ಸಚಿವ ಸಂಪುಟ ನಿರ್ಧರಿಸಿದೆ.

ದಿನಾಂಕ: 13.09.2023ರಂದು ಜರುಗಿದ ಸಚಿವ ಸಂಪುಟ ಉಪ ಸಮಿತಿಯು ಹೆಚ್ಚುವರಿಯಾಗಿ 134 ತಾಲ್ಲೂಕುಗಳಿಗೆ ಜಿಲ್ಲಾಧಿಕಾರಿಗಳಿಂದ ಬೆಳೆ ಹಾನಿ ಸಮೀಕ್ಷೆ ಬಗ್ಗೆ ವರದಿಯನ್ನು ಪಡೆದು ಪರಿಶೀಲಿಸಿ, ಮೊದಲು ಸಾಧಾರಣವೆಂದು ಗುರುತಿಸಲಾದ 51 ತಾಲ್ಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಕ್ಷೇತ್ರ ದೃಢೀಕರಣ (Ground Truthing) ಕೈಗೊಂಡ ನಂತರ 41 ತಾಲೂಕುಗಳು ನೀವು ಬರ ವರ್ಗದಲ್ಲಿ ಹಾಗೂ ಉಳಿದ 10 ತಾಲ್ಲೂಕುಗಳು ಸಾಧಾರಣ ಬರ ವರ್ಗದಲ್ಲಿ ಗುರುತಿಸಲಾಗಿದೆ. ಹೊಸದಾಗಿ ಬರ ಪರಿಸ್ಥಿತಿಕಂಡು ಬಂದ 83: ತಾಲೂಕುಗಳ ಪೈಕಿ 58 ತಾಲೂಕುಗಳು ತೀವು ಬರ ಹಾಗೂ 24 ತಾಲೂಕುಗಳು ಸಾಧಾರಣ ಬರವೆಂದು ನಿರ್ಣಯಿಸಿದೆ. ಅದರಂತೆ ಕೇಂದ್ರ ಸರ್ಕಾರ ಬರ ನಿರ್ವಹಣೆ ಕೆಪಿಡಿ – 2020 ರಲ್ಲಿ ನೀಡಿರುವ, ಬರ, ಘೋಷಣೆಯ ಮಾರ್ಗಸೂಚಿಯನ್ನಯ ಬರ ಘೋಷಣೆಯ ಮಾನದಂಡಗಳನ್ನು ಪರಿಗಣಿಸಿ ಒಟ್ಟಾರೆಯಾಗಿ ರಾಜ್ಯದ 31 ಜಿಲ್ಲೆಗಳ, 236 ತಾಲ್ಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ. ಈ ಎಲ್ಲಾ ತಾಲೂಕುಗಳಲ್ಲಿ ಬೆಳಹಾತಿ ಸಮೀಕ್ಷೆ (Ground, Truthing ಕೈಗೊಂಡ ನಂತರ ಅಂತಿಮವಾಗಿ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ತಾಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲೆಂದು ತುರ್ತು ಬರ ನಿರ್ವಹಣಾ ಜವಾಬ್ದಾರಿ ವಹಿಸಬೇಕಾದ್ದರಿಂದ ಸನ್ಮಾನ್ಯ ಮುಖ್ಯಮಂತ್ರಿಯವರು ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA), ಅಧ್ಯಕ್ಷರ ಅನುಮೋದನೆ ಪಡೆಯಲು ತೀರ್ಮಾನಿಸಲಾಯಿತು. ಈ ಎಲ್ಲಾ ಪ್ರಕ್ರಿಯೆಯನ್ನು ಕಾಲಕಾಲಕ್ಕೆ, KSDMA ಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ಸರ್ಕಾರದ ಮುಖ್ಯ ಕಾರ್ಯದರ್ಶಿರವರ ಅವಗಾಹನೆಗೆ ತರಲಾಗಿದೆ.



ಸರ್ಕಾರವು ದಿನಾಂಕ:13.09.2023ರ ಸಚಿವ ಸಂಪುಟ ಉಪ ಸಮಿತಿಯ ತೀರ್ಮಾನದಂತೆ ಮಾನ್ಯ ಮುಖ್ಯ ಮಂತ್ರಿಯವರ ಅನುಮೋದನೆಯನ್ನು ಪಡೆದು ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದೆ. ಈ ಎಲ್ಲಾ ತಾಲೂಕುಗಳಲ್ಲಿ ಬೆಳೆಹಾನಿ ಸಮೀಕ್ಷೆ (Ground, Truthing) ಕೈಗೊಂಡ ನಂತರ ಅಂತಿಮವಾಗಿ 161 ತಾಲೂಕುಗಳನ್ನು ನೀವು ಬರ ಪೀಡಿತ ತಾಲ್ಲೂಕುಗಳು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರ ಬರಪೀಡಿತ ತಾಲೂಕುಗಳೆಂದು ಘೋಷಿಸಲು ನಿರ್ಣಯಿಸಿದ. ಅದರಂತೆ ಈ ಕೆಳಕಂಡ ಆದೇಶ ಸರ್ಕಾರದ ಆದೇಶದ ಸಂಖ್ಯೆ: ಕಂಇ 449 ಟಿಎನ್‌ಆರ್ 2023,

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ – 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ನಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ Ground, Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡು ಬಂದಿದ್ದು, ಈ ಪೈಕಿ 161 ತಾಲೂಕುಗಳನ್ನು ನೀವು ಬರಪೀಡಿತ ತಾಲೂಕು (ಅನುಬಂಧ-1) ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು (ಅನುಬಂಧ-2) ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಿದ

ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ SDRF/NDRF ನಿಯಮಗಳನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು.

ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ
13/09/2023 (ಟಿ.ಸಿ. ಕಾಂತರಾಜ್) ಸರ್ಕಾರದ ಜಂಟಿ ಕಾರ್ಯದಶಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ.

ಇವರಿಗೆ: ಸಂಕಲನಕಾರರು, ಕರ್ನಾಟಕ ವಿಶೇಷ ರಾಜ್ಯಪತ್ರ, ವಿಕಾಸಸೌಧ ಬೆಂಗಳೂರು ಈ ಆದೇಶವನ್ನು ಕೂಡಲೇ ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟಿಸಲು ಕೋರಿದೆ.

1) ಮಹಾಲೇಖಪಾಲರು (ಎಇ), ಕರ್ನಾಟಕ, ಬೆಂಗಳೂರು,

2) ಸರ್ಕಾರದ ಎಲ್ಲಾ ಅವರ ಮುಖ್ಯ ಕಾರ್ಯದರ್ಶಿ/ಪಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು

3) .ಪ್ರಾದೇಶಿಕ ಆಯುಕ್ತರು, ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು,

5) ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, 6) ರಾಜ್ಯದ ಎಲ್ಲಾ ವಿದ್ಯುತ್‌ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು,

7) ಆಯುಕ್ತರು, ಕೃಷಿ ಇಲಾಖೆ, ಶೇಷಾದ್ರಿ ರಸ್ತೆ, ಬೆಂಗಳೂರು.

8) .ಆಯುಕ್ತರು, ಪಶು ಸಂಗೋಪನ ಮತ್ತು ಪಶು ವೈದ್ಯಕೀಯ ಸೇವೆಗಳ ಇಲಾಖೆ, ಬೆಂಗಳೂರು,

9) ವಿರ್ದೇಶಕರು, ತೋಟಗಾರಿಕ ಇಲಾಖೆ, ಆವಾಗ, ಬೆಂಗಳೂರು,

10) ನಿರ್ದೇಶಕರು, ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರು, ಅಟ್ಟೂರು ಬಡಾವಣೆ

ಯಲಹಂಕ, ಬೆಂಗಳೂರು,

11) ನಿರ್ದೇಶಕರು, ರಾಜ್ಯ ಹುಜರ್‌ ಖಜಾನೆ, ಬೆಂಗಳೂರು,

12) .ಉಪ ನಿರ್ದೇಶಕರು, ರಾಜ್ಯ ಹುಜೂರ್‌ ಖಜಾನೆ, ಬೆಂಗಳೂರು,

13) ಉಪ ನಿರ್ದೇಶಕರು, ಖಜಾನ ವರ್ಕ್ ಮ್ಯಾನೇಜ್‌ಮೆಂಟ್ ಸೆಂಟರ್, ಖನಿಜ ಭವನ ಬೆಂಗಳೂರು.

14) ಎಲ್ಲಾ ಜಿಲ್ಲೆಗಳ ಜಿಲ್ಲಾ ಖಜಾನಾಧಿಕಾರಿಗಳು,

15) ಮಾನ್ಯ ಕಂದಾಯ ಸಚಿವರ ಆಪ್ತ ಕಾರ್ಯದರ್ಶಿಗಳು, ಬೆಂಗಳೂರು,

16) .ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವರ ಆಪ್ತ ಕಾರ್ಯದರ್ಶಿ

17) .ಮಾನ್ಯ ಕೃಷಿ ಸಚಿವರ ಅಪ್ತ ಕಾರ್ಯದರ್ಶಿ,

18) ಮಾನ್ಯ ಲೋಕೋಪಯೋಗಿ ಸಚಿವರ ಆಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು.

19) ಮಾನ ತೋಟಗಾರಿಕೆ ಸಚಿವರ ಅಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು,

20) ಮಾನ್ಯ ಸಹಕಾರ ಸಚಿವರ ಆಪ್ತ ಕಾರ್ಯದರ್ಶಿ ವಿಧಾನ ಸೌಧ ಬೆಂಗಳೂರು

21) ಮಾನ್ಯ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರ ಆಪ್ತ ಕಾರ್ಯದರ್ಶಿ, ವಿಕಾಸ ಸೌಧ, ಬೆಂಗಳೂರು.

22) ಮಾನ್ಯ ಪಶುಸಂಗೋಪನೆ ಸಚಿವರ ಆಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು,

23) 23 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು,

24) ಮಾನ್ಯ ಮುಖ್ಯ ಮಂತ್ರಿಯವರ ಅವರ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ, ವಿಧಾನ

ಸೌಧ, ಬೆಂಗಳೂರು, ಬೆಂಗಳೂರು,

25) ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ, ವಿಧಾನಸೌಧ, ಬೆಂಗಳೂರು,

26) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಗಳು, ವಿಧಾನ ಸೌಧ, ಬೆಂಗಳೂರು.

27) ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರುರವರ ಆಪ್ತ ಕಾರ್ಯದರ್ಶಿ, ವಿಧಾನ ಸೌಧ, ಬೆಂಗಳೂರು.

28) ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ರವರ ಅಪ್ಪ ಕಾರ್ಯದರ್ಶಿ, ಬಹುಮಹಡಿಗಳ ಕಟ್ಟಡ, ಮಂಗಳೂರು

29) ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ), ಲೆಕ್ಕಪತ್ರ ಶಾಖೆ,

30) ಶಾಖಾ ರಕ್ಷಾ ಕಡತ/ಹೆಚ್ಚುವರಿ ಪ್ರತಿ

2023 ಮುಂಗಾರಿನಲ್ಲಿ ತೀವ್ರ ಬರ ಪೀಡಿತ 161ತಾಲ್ಲೂಕುಗಳ ಪಟ್ಟಿ

Leave a Reply

Your email address will not be published. Required fields are marked *

Scan the code