ಕೋಲಾರನ್ಯೂಸ್

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೌತಮ್ ನಾಮಪತ್ರ ಸಲ್ಲಿಕೆ ತಾಲೂಕಿನಿಂದ 3000 ಜನ ಬಾಗಿ ಶಾಸಕ ಎಸ್ಎನ್ ನಾರಾಯಣಸ್ವಾಮಿ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೌತಮ್ ನಾಮಪತ್ರ ಸಲ್ಲಿಕೆ ತಾಲೂಕಿನಿಂದ 3000 ಜನ ಬಾಗಿ ಶಾಸಕ ಎಸ್ಎನ್ ನಾರಾಯಣಸ್ವಾಮಿ

(KOLARA): ಬಂಗಾರಪೇಟೆ :ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ.ವಿ ಗೌತಮ್ ರವರು ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಈ ಸಂದರ್ಭದಲ್ಲಿ ತಾಲೂಕಿನಿಂದ 210 ಟಾಟಾ ಸುಮೋ ಗಳ ಮುಖಾಂತರ ಭಾಗವಹಿಸುತ್ತಿದ್ದೇವೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಎಸ್ ಎನ್ ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಹಿನ್ನೆಲೆ ತಾಲೂಕಿನಿಂದ ಸುಮಾರು 3000 ಜನ ಹೆಚ್ಚು ಜನ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಪುರಸಭೆಯ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಕಾಂಗ್ರೆಸ್ ಮುಖಂಡರು,ಕಾರ್ಯಕರ್ತರು, ಹಾಗೂ ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದರು.

ಒಟ್ಟಾರೆಯಾಗಿ ನನ್ನ ಭಾಗದಿಂದ ಉತ್ತಮವಾದ ಸ್ಪಂದನೆ ದೊರಕುತ್ತಿದೆ, ಖಂಡಿತವಾಗಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಯಾದ ಕೆ ವಿ ಗೌತಮ್ ರವರಿಗೆ ನನ್ನ ಕ್ಷೇತ್ರದಿಂದ ಹೆಚ್ಚಿನ ಮತಗಳನ್ನು ತಂದುಕೊಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದು, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಉಪಾಧ್ಯಕ್ಷ ಶ್ರೀನಿವಾಸ್, ಪುರಸಭೆ ಸದಸ್ಯರಾದ ವೆಂಕಟೇಶ್,ಸಾಧಿಕ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಗೋಪಾಲರೆಡ್ಡಿ, ಮಹದೇವಪ್ಪ, ಇನ್ನು ಅನೇಕ ಮುಖಂಡರು ಭಾಗವಹಿಸಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code