ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಮುಂದೆ ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಸ್ಥಾಪಿಸಬೇಕೆಂದು ಪಟ್ಟಣದಲ್ಲಿ ಆತ್ಮವಿಶ್ವಾಸ ವೇದಿಕೆಯಿಂದ ಒತ್ತಾಯ
(KOLARA): ಬಂಗಾರಪೇಟೆ: ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಹಾಗೂ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಗಳನ್ನು ಸ್ಥಾಪಿಸಬೇಕೆಂದು ಆತ್ಮವಿಶ್ವಾಸ ವೇದಿಕೆಯ ರಾಜ್ಯ ಅಧ್ಯಕ್ಷ ಎಂ ಎನ್ ಭಾರತ್ವಾಜ್ ಉಪತಾಶಿಲ್ದಾರ್ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡುತ್ತಾ, ರಾಜ್ಯ ಸರ್ಕಾರ ಈ ಕೂಡಲೇ ರಾಜ್ಯದ ಎಲ್ಲಾ ಮಿನಿ ವಿಧಾನಸೌಧ ಹಾಗು ಜಿಲ್ಲಾಧಿ ಕಚೇರಿಗಳ ಮುಂದೆ ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯ ಮಾಡಿದರು.
ಈ ಸಂದರ್ಭದಲ್ಲಿ ಅಯ್ಯಪ್ಪ, ಶ್ರೀನಿವಾಸಪ್ಪ, ಮುರಳಿ, ಮಂಜುನಾಥ್, ರಾಜು, ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ