ನ್ಯೂಸ್ಶಿವಮೊಗ್ಗ

ಸೆ.3 ರ ಮಂಗಳವಾರ ಶ್ರೀ ವೀರಭದ್ರೇಶ್ವರ ಜಯಂತಿ ಆಚರಿಸಲು ಕರೆ

ಸೆ.3 ರ ಮಂಗಳವಾರ ಶ್ರೀ ವೀರಭದ್ರೇಶ್ವರ ಜಯಂತಿ ಆಚರಿಸಲು ಕರೆ

(SHIVAMOGA): ಸೊರಬ: ಭಾದ್ರಪದ ಮಾಸದ ಮೊದಲ ಮಂಗಳವಾರ ವೀರಶೈವ ಸಮಾಜ ಬಾಂಧವರು ನಾಡಿನಾದ್ಯಂತ ಶ್ರೀ ವೀರಭದ್ರೇಶ್ವರ ಜಯಂತಿಯನ್ನು ಆಚರಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕರೆ ನೀಡಿದೆ.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಳೆದ ಆರು ವರ್ಷಗಳಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವೀರಭದ್ರೇಶ್ವರ ಜಯಂತಿ ಆಚರಿಸುವುದರೊಂದಿಗೆ ಪ್ರತಿವರ್ಷ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶೈಕ್ಷಣಿಕ ಕ್ಷೇತ್ರದ ಸಾದಕ ಪ್ರಭಾಕರ ಕೋರೆ, ಇಸ್ರೋ ಅಧ್ಯಕ್ಷ ಸೋಮನಾಥ ರವರುಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪುರಾಣ ಪ್ರಸಿದ್ದ ಶ್ರೀರಾಮನ ಬಂಟ ಶ್ರೀ ಆಂಜನೇಯ ಸ್ವಾಮಿಗೆ ಲಿಂಗದೀಕ್ಷೆ ನೀಡಿದ ವೀರಭದ್ರ ದೇವರ ಜಯಂತಿ ಯನ್ನು ಭಾದ್ರಪದ ಮಾಸದ ಮೊದಲ ಮಂಗಳವಾರ ಆಚರಿಸಲಾಗುತ್ತಿದೆ.
ಆದ್ದರಿಂದ ಸೆ.3 ರ ಮಂಗಳವಾರ ನಾಡಿನಾದ್ಯಂತ ಸ್ವಾಮಿಯ ಜಯಂತಿಯನ್ನು ಶ್ರದ್ಧಾ, ಭಕ್ತಿಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆ ನಡೆಸಲಾಗಿದೆ. ತಮ್ಮತಮ್ಮ ಊರು, ಗ್ರಾಮಗಳ ವೀರಭದ್ರೇಶ್ವರ ದೇವಾಲಯ, ಕಲ್ಯಾಣ ಮಂಟಪ, ಸಮುದಾಯ ಭವನ ಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಹಾಗು ಕಾರ್ಯಕ್ರಮಗಳನ್ನು ಆಯೋಜಿಸಿ ವೀರಭದ್ರ ದೇವರ ಕೃಪೆಗೆ ಪಾತ್ರರಾಗುವಂತೆ ವೇದಿಕೆಯ ಮಧ್ಯ ಕರ್ನಾಟಕ ಅಧ್ಯಕ್ಷ ಸಿ.ಪಿ ಈರೇಶಗೌಡ ಸೊರಬ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಸಂದೀಪ್ ಯು. ಎಲ್ ಸೊರಬ

Leave a Reply

Your email address will not be published. Required fields are marked *

Scan the code