ಡಿಕೆ ಹಳ್ಳಿ ಬಳಿ ಕೆರೆಯಲ್ಲಿ ತುರ್ತು ಭೂಸ್ಪರ್ಷ ಮಾಡಿದ ಹೆಲಿಕ್ಯಾಪ್ಟರ್
(KOLARA): ಬಂಗಾರಪೇಟೆ : ತಾಲೂಕಿನ ಡಿಕೆ ಹಳ್ಳಿ ಕೆರೆಯಲ್ಲಿ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಷ ಮಾಡಿದ ಇಂಡಿಯನ್ ಏರ್ ಫೋರ್ಸ್ ಹೆಲಿಕಾಪ್ಟರ್ ಸುದ್ದಿ ಕೇಳಿ ಸುತ್ತ ಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸತೊಡಗಿದರು. ಹೆಲಿಕಾಪ್ಟರ್ ನೋಡಿದ ಗ್ರಾಮಸ್ಥರು ಅದರ ಬಳಿ ಹೋಗಿ ಸೆಲ್ಫಿ ತೆಗೆದುಕೊಳ್ಳಲು ಮುಗಿ ಬಿದ್ದರು. ಈ ವೇಳೆ ಸೇನೆಯ ಸಿಬ್ಬಂದಿ ಹೆಲಿಕಾಪ್ಟರ್ ಹತ್ತಿರ ಸುಳಿಯ ಬೇಡಿ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.
ಇನ್ನು ಈ ಸುದ್ದಿಯನ್ನು ಮೇಲಧಿಕಾರಿಗಳಿಗೆ ರವಾನಿಸಲಾಗಿದ್ದು, ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾದ ಸ್ಥಳಕ್ಕೆ ಕೆಜಿಎಫ್ ಪೊಲೀಸ್ ಎಸ್ ಪಿ ಶಾಂತರಾಜು ಭೇಟಿ ನೀಡಿದ್ದಾರೆ. ಇನ್ನು ಸೇನಾ ಸಿಬ್ಬಂದಿ ಸಹ ದೌಡಾಯಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಾಗಿದ್ದು, ಸದ್ಯ ಹೆಲಿಕಾಪ್ಟರ್ ಲ್ಯಾಂಡ್ ಆದ ಸ್ಥಳದಲ್ಲಿ ಜನಸಾಗರವೇ ಹರಿದು ಬರುತ್ತಿದೆ.
ಅದೃಷ್ಟವಶಾತ್ ತುರ್ತು ಭೂಸ್ಪರ್ಶದ ವೇಳೆ ಯಾವುದೇ ಅನಾಹುತ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವರದಿ: ವಿಷ್ಣು ಕೋಲಾರ