ಖಾಸಗಿ ಬಸ್ ಅತಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ
(KOLARA): ಬಂಗಾರಪೇಟೆ :ಪಟ್ಟಣದ ಜೂನಿಯರ್ ಕಾಲೇಜ್ ಮೈದಾನ ಮುಂಭಾಗ ಖಾಸಗಿ ಬಸ್ ಅತಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಮೇಲೆ ಹರಿದು ಹೋಗಿದೆ ಇದರಿಂದ ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯಗಳಾಗಿದೆ. ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿವೆ ತಕ್ಷಣ ಸ್ಥಳೀಯರು ಗಾಯಗೊಂಡ ಬೈಕ್ ಸವಾರರನ್ನು ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಖಾಸಗಿ ಬಸ್ ಚಾಲಕ ಬಸ್ಸನ್ನು ನಿಲ್ಲಿಸದೆ ಹಾಗೆ ಹೋಗಿ ಟೋಟಲ್ ಗ್ಯಾಸ್ ಮುಂಭಾಗ ಡಿವೈಡರ್ ಮೇಲೆ ಹತ್ತಿಸಿದ್ದಾನೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಸುಣ್ಣಪಟ್ಟಣಗಳಿಂದ ಪಾರಾಗಿದ್ದಾರೆ. ಬಸ್ ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಸಹ ಆಸ್ಪತ್ರೆಗೆ ಸಾಗಿಸಲಾಗಿದೆ.
ಬೈಕ್ ಸವಾರ ಶಂಕರ ಹಿಂಬದಿ ಕುಳಿತಿದ್ದ ರವಿ ಮೂಲತಹ ತಾಲೂಕಿನ ಚಲಗಾನಹಳ್ಳಿ ಗ್ರಾಮದ ಗ್ರಾಮದವರೆಂದು ತಿಳಿದು ಬಂದಿದೆ. ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ತೆರೆದಿರುವ ಪಟಾಕಿ ಅಂಗಡಿಗೆ ಪಟಾಕಿ ಖರೀದಿಸಲು ಹೋಗುವ ಸಂದರ್ಭದಲ್ಲಿ ಈ ಒಂದು ದುರ್ಘಟನೆ ನಡೆದಿದೆ.
ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ