ಎಪಿಎಂಸಿ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
(ಹಸಾನ): ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಎಪಿಎಂಸಿ ಆವರಣದಲ್ಲಿ ನಾಗಸಮುದ್ರ ರಸ್ತೆಯ ಕೇರಿಯ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
28 ವರ್ಷದ ಸೋಮ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಯುವಕ, ಆತ್ಮಹತ್ಯೆಗೆ ಮೊದಲು ಡೆತ್ ನೋಟ್ ಬರೆದಿಟ್ಟಿದ್ದು ನನ್ನ ಸಾವಿಗೆ ನಾನೇ ಕಾರಣ ಕುಟುಂಬದವರಾಗಲಿ ಸ್ನೇಹಿತರಾಗಲಿ ಇದಕ್ಕೆ ಯಾರು ಕಾರಣರಲ್ಲ ಎಂದು ತಿಳಿಸಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಿ ಮೃತನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
ವರದಿ: ಶಾಮಸುಂದರ್ ಕೆ ಅಣ್ಣೇನಹಳ್ಳಿ