ರೈತ ಸಂಪರ್ಕ ಕೇಂದ್ರದಲ್ಲಿ ಹತ್ತು ಹಲವಾರು ಸಮಸ್ಯೆಗಳ ವಿರುದ್ಧ ಆಕ್ರೋಶ.
(KOLARA): ಕೋಲಾರ : ತಾಲೂಕಿನ ವೇಮಗಲ್ ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಹತ್ತು ಹಲವಾರು ಸಮಸ್ಯೆಗಳ ಬಗ್ಗೆ ದಲಿತ ಮುಖಂಡರುಗಳು ಹಾಗೂ ರೈತರು ಸೋಮವಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದರು.
ಬುಧವಾರ ಹಾಗೂ ಗುರುವಾರವು ಸಹ ಹಲವು ಪತ್ರಿಕೆಗಳಲ್ಲಿ ಸುದ್ದಿಯೂ ಸಹ ಪ್ರಸಾರವಾಗಿತ್ತು, ಗುರುವಾರ ಪತಿಭಟನೆಯನ್ನು ಮಾಡುವುದಾಗಿ ದಲಿತ ಮುಖಂಡರು ಹಾಗೂ ರೈತರು ತಿಳಿಸಿದ್ದರು, ಆದರೆ ಇದನ್ನರಿತ ಸಂಬಂಪಟ್ಟ ಅಧಿಕಾರಿಗಳಾದ ಜಂಟಿ ಕೃಷಿ ನಿರ್ದೇಶಕಿ ಸುಮ ರವರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಮಹೇಶ್ ರವರು ಗುರುವಾರ ವೇಮಗಲ್ ರೈತ ಸಂಪರ್ಕ ಬಳಿ ದಾವಿಸಿ ಇಲ್ಲಿ ನಡೆದಿರುವ ಸಮಸ್ಯೆಗಳು ಬಗ್ಗೆ ಮಾಹಿತಿ ತಿಳಿದು ಕೊಂಡು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಯಾವುದೇ ಪ್ರತಿಭಟನೆ ಬೇಡ ಎಂದು ಸಮಾಧಾನ ಪಡಿಸಿದರು.
ಇದೇ ಸಂದರ್ಭದಲ್ಲಿ ರೈತರು ಮತ್ತಷ್ಟು ಸಮಸ್ಯೆಗಳನ್ನು ತಿಳಿಸಿದರು ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಜಂಟಿ ಕೃಷಿ ನಿರ್ದೇಶಕಿ ಸುಮ ರವರು ರೈತರಿಗೆ ಹಾಗೂ ದಲಿತ ಮುಖಂಡರಿಗೆ ಮನವಿ ಮಾಡಿ
ಭರವಸೆಯನ್ನು ನೀಡಿದರು.
ನಂತರ ಮಾತನಾಡಿದ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಪುರಳ್ಳಿ ಜಿ.ಯಪ್ಪರವರು ನೀವು ಆದಷ್ಟು ಬೇಗ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕೋಲಾರ ಜಂಟಿ ಕೃಷಿ ನಿರ್ದೇಶಕಿ ಸುಮಾ,ಸಹಾಯಕ ಕೃಷಿ ನಿರ್ದೇಶಕರಾದ ಮಹೇಶ್, ವೇಮಗಲ್ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಧರ್, ವೇಮಗಲ್ ಪೊಲೀಸ್ ಠಾಣೆಯ ಎ.ಎಸ್.ಐ ರಾಮಣ್ಣ, ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಪುರಹಳ್ಳಿ ಜಿ.ಯಲ್ಲಪ್ಪ, ಸಂಘಟನಾ ಸಂಚಾಲಕರಾದ ಚನ್ನಪ್ಪನಹಳ್ಳಿ ಜಿ.ನಾಗರಾಜ್, ನಾಗನಾಳ ರಮೇಶ್,ಚಂಜಿಮಲೆ ರೈತ ಮುನಿಯಪ್ಪ, ಹಾಗೂ ರೈತರು ಉಪಸ್ಥಿತರಿದ್ದರು.
ವರದಿ ವಿಷ್ಣು ಕೋಲಾರ