ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಎಲ್ಲಾರಿಗೂ ಸಮನಾಗಿ ಗೌರವ ಸಿಗುವುದು.
(KOLARA): ಬಂಗಾರಪೇಟೆ : ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಎಲ್ಲಾ ಮುಖಂಡರರು ಹಾಗೂ ಯುವಕರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಇವರ ಎಲ್ಲರ ಸಹಕಾರದೊಂದಿಗೆ ಕೆ ವಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಐನೋರಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ತ್ಯಾರನಹಳ್ಳಿ ಗ್ರಾಮದ ಮುಖಂಡರು ಹಾಗೂ ಯುವಕರು 40ಕ್ಕೂ ಹೆಚ್ಚು ಜನ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡುತ್ತಾ, ತ್ಯಾರನಹಳ್ಳಿ ಗ್ರಾಮದ ನಾರಾಯಣಸ್ವಾಮಿ ನೇತೃತ್ವದಲ್ಲಿ ಇಂದು ಮಾಜಿ ಸದಸ್ಯ ಚಂದ್ರಶೇಖರ್ ಹಾಗೂ ಅವರ ಬೆಂಬಲಿಗರು ಸುಮಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ನಡೆದಂತಹ ಬದಲಾವಣೆಯನ್ನು ಗಮನಿಸಿ ಹಾಗೂ ಮನನೊಂದು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಕಾರ್ಯಗಳು ಹಾಗೂ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸೇರ್ಪಡೆಯಾಗಿರುವುದು ಸಂತಸದ ವಿಷಯವಾಗಿದೆ ಎಂದರು.
ಇದುವರೆಗೂ ಕಾಂಗ್ರೆಸ್ ಪಕ್ಷದಲ್ಲಿ ಯಾರು ಸೇರ್ಪಡೆಯಾಗಿದ್ದಾರೋ ಅವರೆಲ್ಲರೂ ನೆಮ್ಮದಿಯಾಗಿದ್ದಾರೆ ನಮ್ಮ ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ ಎಲ್ಲರೂ ಸಹೋದರರಾಗಿ ಇರುತ್ತೇವೆ ಒಟ್ಟಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ಕೆಲಸ ಮಾಡುತ್ತೀವಿ ಯಾರಿಗೆ ತೊಂದರೆ ಆದರೂ ಸಹ ನಾವೆಲ್ಲರೂ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯ ಪ್ರಚಾರವನ್ನು ಇದೇ ತಿಂಗಳು 12 ತಾರೀಕು ಶುಕ್ರವಾರದಂದು ಕಾಮಸಮುದ್ರ ಹೋಬಳಿ ಹಾಗೂ ಬೂದಿಕೋಟೆ ಹೋಬಳಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಬೆಳಗ್ಗೆ 10.30 ಕ್ಕೆ ಬೂದಿಕೋಟೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಅದೇ ದಿನ ಮಧ್ಯಾಹ್ನ 3 ಗಂಟೆಗೆ ಡಿಕೆ ಹಳ್ಳಿ ವ್ಯಾಪ್ತಿಯ ದಾಸರ ಹೊಸಹಳ್ಳಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಎರಡು ಸಭೆಗೆ ಅಭ್ಯರ್ಥಿಯಾದ ಕೆ ವಿ ಗೌತಮ್, ಉಸ್ತುವಾರಿ ಮಂತ್ರಿಗಳು, ಹಾಗೂ ಅನೇಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದ ಮಂತ್ರಿಗಳಾದ ಕೆಎಚ್ ಮುನಿಯಪ್ಪ, ಬೈರತಿ ಸುರೇಶ್, ಡಾಕ್ಟರ್ ಸುಧಾಕರ್, ಬಳಿ ಮಾತನಾಡಿದ್ದೇನೆ ಯಾರಲ್ಲೂ ಸಹ ಅವಿಶ್ವಾಸ ಇಲ್ಲ ಎಲ್ಲರೂ ಸಹ ಒಗ್ಗಟ್ಟಾಗಿ ಚುನಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ನಮ್ಮಲ್ಲಿ ಯಾವುದೇ ಬಣಗಳು ಇಲ್ಲ ಎಲ್ಲರದು ಒಂದೇ ಬಣ ಕಾಂಗ್ರೆಸ್ ಬಣ ಎಂದು ಹೇಳಿದರು.
ಈ ವೇಳೆ ದೊಡ್ಡ ವಲಗಮಾದಿ ಗ್ರಾಮ ಪಂಚಾಯಿತಿ ಸದಸ್ಯರಾದ ಐಮಸಪುರದ ಜೀವನ್ ರವರು ಶಾಸಕ ಎಸ್ಎನ್ ನಾರಾಯಣಸ್ವಾಮಿ ರವರಿಗೆ ಸನ್ಮಾನಿಸಿ ಗೌರವಿಸಿದ್ದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದು ಕುಮಾರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೋಪಾಲ್, ಸದಸ್ಯರಾದ ರಾಮರೆಡ್ಡಿ, ರೈತ ಸಂಘದ ಜಿಲ್ಲಾಧ್ಯಕ್ಷ ರಾಮೇಗೌಡ, ಚಂದ್ರಶೇಖರ್, ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ