ಚಿಕ್ಕಮಗಳೂರುನ್ಯೂಸ್

ದುರ್ಗಾರಾಧನೆಯಿಂದ ಸಕಲ ಸಂಕಷ್ಟಗಳು ದೂರ.
ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ರಾಜಗೋಪಾಲ ಜೋಷಿ

ದುರ್ಗಾರಾಧನೆಯಿಂದ ಸಕಲ ಸಂಕಷ್ಟಗಳು ದೂರ.ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದ ರಾಜಗೋಪಾಲ ಜೋಷಿ

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ನವರಾತ್ರಿಯ ಸಂದರ್ಭದಲ್ಲಿ ಒಂಬತ್ತು ದಿನಗಳ ಕಾಲ ದುರ್ಗೆಯನ್ನು ವಿವಿಧ ರೂಪಗಳಲ್ಲಿ ಆರಾಧನೆ ಮಾಡುವುದರಿಂದ ಮನುಕುಲದ ಸಕಲ ಸಂಕಷ್ಟಗಳು ದೂರಾಗಲಿವೆ ಎಂದು ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಟ್ರಸ್ಟಿ ಜಿ.ರಾಜಗೋಪಾಲ ಜೋಷಿ ಹೇಳಿದರು.
ಪಟ್ಟಣದ ಶ್ರೀ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರದಿಂದ ಆಯೋಜಿಸಿರುವ ಹದಿನೈದನೇ ವರ್ಷದ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಸುಮಧುರ ಜೀವನಕ್ಕೆ ಸತ್ ಚಿಂತನೆ ಅಗತ್ಯವಾಗಿದ್ದು, ಸತ್ವ ಚಿಂತನೆಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಭಗವಂತನ ಅನುಗ್ರಹ ದೊರೆಯಲಿದೆ. ಜೀವನದಲ್ಲಿ ಆನಂದ, ಧನ್ಯತೆ ಪಡೆಯಲು ದೈವ ಸಾನಿಧ್ಯ ಅಗತ್ಯವಾಗಿ ಇರಬೇಕಿದೆ. ದೇವನೊಬ್ಬ ನಾಮ ಹಲವಾಗಿದ್ದು, ಎಲ್ಲ ದೇವರುಗಳಲ್ಲಿಯೂ ಉತ್ತಮವಾದ ಸಾನಿಧ್ಯವಿದೆ. ನಾವುಗಳನ್ನು ದೇವರನ್ನು ವಿವಿಧ ರೂಪಗಳಲ್ಲಿ ಕಾಣಲಿದ್ದೇವೆ. ದೇವರ ರೂಪಗಳಲ್ಲಿ ಸಾನಿಧ್ಯವನ್ನು ಪುರೋಹಿತ ವರ್ಗ ತುಂಬಲಿದ್ದಾರೆ.
ನಾವುಗಳು ಆಡಂಬರಕ್ಕೆ ಒತ್ತು ನೀಡದೆ ಭಾವಪೂರ್ವಕವಾಗಿ ಮಾಡುವ ಕೆಲಸಗಳು ಭಗವಂತನ ಮೆಚ್ಚುಗೆ ಪಾತ್ರವಾಗಲಿದೆ. ಪಂಚೇದ್ರೀಯ ಹಾಗೂ ಮನಸ್ಸು ಒಂದು ಒಳ್ಳೆಯ ಕೆಲಸಕ್ಕೆ ಸಂಕಲ್ಪ ಮಾಡಿದರೆ ಅದು ಪರಿಪೂರ್ಣವಾಗಲಿದೆ.
ಬಾಳೆಹೊನ್ನೂರು ಪಟ್ಟಣದಲ್ಲಿ ಕಳೆದ ಹದಿನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಧಾರ್ಮಿಕ ಪ್ರಧಾನತೆಯಿಂದ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬಂದಿದ್ದು, ಭಕ್ತ ಸಂಕುಲಕ್ಕೆ ಧರ್ಮ, ಸಂಸ್ಕೃತಿಯ ಅರಿವು ಮೂಡಿಸುತ್ತಿರುವುದು ದುರ್ಗೆಯ ಮನಸ್ಸಿಗೆ ಒಪ್ಪಿಗೆಯಾಗಿದೆ ಎಂಬ ಭಾವನೆ ನಮ್ಮದಾಗಿದೆ. ಇದಕ್ಕಾಗಿ ಈ ಉತ್ಸವ ಇಷ್ಟೊಂದು ಯಶಸ್ವಿಯಾಗುತ್ತಿದೆ ಎಂದರು.


ದುರ್ಗಾ ಸಮಿತಿಯ ಕೋಶಾಧಿಕಾರಿ ಭಾಸ್ಕರ್ ವೆನಿಲ್ಲಾ ಮಾತನಾಡಿ, ಈ ಬಾರಿ ನವರಾತ್ರಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸುತ್ತಿದ್ದು, ಪ್ರತಿದಿನ ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತಿದೆ. ಪ್ರತಿದಿನ ಧರ್ಮಾವಲಂಬಿತ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಗುರುವಾರ ಮುಂಜಾನೆ ಕ್ಷೇತ್ರನಾಥ ಮಾರ್ಕಾಂಡೇಶ್ವರ ಸ್ವಾಮಿಗೆ ರುದ್ರಾಭಿಷೇಕ, ನಾಗದೇವರಿಗೆ ಕ್ಷೀರಾಭಿಷೇಕ, ಮೃತ್ಯಂಬಿಕಾ ಅಮ್ಮನವರಿಗೆ ಅಭಿಷೇಕ, ಸಹಸ್ರನಾಮಾರ್ಚನೆ ಹಾಗೂ ಫಲಸಮರ್ಪಣೆ, ದುರ್ಗಾ ಸನ್ನಿಧಿಯಲ್ಲಿ ಗಣಹೋಮ ನಡೆಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದುರ್ಗಾಪರಮೇಶ್ವರಿ ವಿಗ್ರಹ ಪ್ರತಿಷ್ಠಾಪಿಸಲಾಯಿತು.
ಈ ಸಂದರ್ಭದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಿಂದ ತಂದಿದ್ದ ಬಾಗಿನವನ್ನು ದುರ್ಗಾದೇವಿ ಮತ್ತು ಮೃತ್ಯಂಬಿಕಾ ಅಮ್ಮನವರ ದೇವಸ್ಥಾನಕ್ಕೆ ರಾಜಗೋಪಾಲ ಜೋಷಿ ಸಮರ್ಪಿಸಿದರು.


ಮಾರ್ಕಾಂಡೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಎಚ್.ಡಿ.ನಾಗೇಶ್ ಹೆಗ್ಡೆ, ದುರ್ಗಾ ಸಮಿತಿಯ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ, ಪ್ರಧಾನ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಜಂಟಿ ಕಾರ್ಯದರ್ಶಿ ಪ್ರಭಾಕರ್ ಪ್ರಣಸ್ವಿ, ಎಚ್.ಡಿ.ಸತೀಶ್, ಉಪಾಧ್ಯಕ್ಷ ಶಿವರಾಮ ಶೆಟ್ಟಿ, ಪ್ರಸನ್ನಾ ಜಿ.ಭಟ್, ಸಹ ಕೋಶಾಧಿಕಾರಿ ಚೈತನ್ಯ ವೆಂಕಿ, ಉಪೇಂದ್ರ, ಎಚ್.ಎಚ್.ಕೃಷ್ಣಮೂರ್ತಿ, ಡಿ.ಎನ್.ಸುಧಾಕರ್, ಶ್ರೀಕಾಂತ್, ಬಿ.ಕೆ.ನಾಗರಾಜ್, ನಾರಾಯಣ ಶೆಟ್ಟಿ, ಕೆ.ಪ್ರಶಾಂತ್‌ಕುಮಾರ್, ಮಂಜು ಹೊಳೆಬಾಗಿಲು ಸೇರಿದಂತೆ ಸಮಿತಿ ಸದಸ್ಯರು ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನ ಅರ್ಚಕರಾದ ಸುಬ್ರಹ್ಮಣ್ಯಭಟ್ ನೇತೃತ್ವದಲ್ಲಿ ಪುರೋಹಿತರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಮಧ್ಯಾಹ್ನ ಹಂಸವಾಹಿನಿ ಬ್ರಾಹ್ಮೀ ಪೂಜೆ, ಸಪ್ತಶತೀ ಪಾರಾಯಣ ಪೂಜೆ ನಡೆಯಿತು. ಅ.4ರ ಶುಕ್ರವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನದವರೆಗೆ ವೃಷಭವಾಹಿನಿ, ಮಾಹೇಶ್ವರಿ ಪೂಜಾ ಪಾರಾಯಣ, ಸಂಜೆ 7ರಿಂದ ಭಕ್ತಾಧಿಗಳಿಂದ ಪೂಜಾ ಸೇವೆ ಮಹಾಮಂಗಳಾರತಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಧೀರಜ್ ರೈ ಸಂಪಾಜೆ ನೇತೃತ್ವದಲ್ಲಿ ತುಳು ಹಾಸ್ಯ ಯಕ್ಷಗಾನ ಕಲಾವಿದರ ಸಂಗಮದಲ್ಲಿ ಯಕ್ಷ-ಹಾಸ್ಯ ವೈಭವನ ನಡೆಯಲಿದೆ.

Leave a Reply

Your email address will not be published. Required fields are marked *

Scan the code