ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆಗೆ ಗುಣಮಟ್ಟ ಪರಿಶೀಲಿಸುವಂತೆ ತರಾಟೆಗೆ ತೆಗೆದುಕೊಂಡ ಶಾಸಕರು.
(KOLARA): ಬಂಗಾರಪೇಟೆ: ತಾಲೂಕಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಬಿತ್ತನೆ ಆಲೂಗಡ್ಡೆ ಗುಣಮಟ್ಟವನ್ನು ಎಂದಾದರೂ ಪರಿಶೀಲನೆ ಮಾಡಿದ್ದೀರಾ ಎಂದು ತೋಟಗಾರಿ ಇಲಾಖೆ ಹಾಗೂ ಕೃಷಿ ಇಲಾಖೆಗೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ತರಾಟೆಗೆ ತೆಗೆದುಕೊಂಡರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೆಡಿಪಿ ಸಭೆಯಲ್ಲಿ ಮಾತನಾಡುತ್ತಾ,ಮಾರುಕಟ್ಟೆಯಲ್ಲಿ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ನೀಡದೆ ಕಳಪೆಯಲ್ಲಿ ಗುಣಮಟ್ಟದ ಆಲೂಗಡ್ಡೆ ಯನ್ನು ರೈತರಿಗೆ ಮಾರಾಟವನ್ನು ಮಾಡುತ್ತಿದ್ದಾರೆ. ಇದರಿಂದ ಉತ್ತಮ ಫಸಲು ಬರದ ಕಾರಣ ಬಹಳಷ್ಟು ನಷ್ಟವನ್ನು ಅನುಭವಿಸಿ ಗಿಡಗಳನ್ನು ಕಿತ್ತು ಹಾಕುತ್ತಿದ್ದಾರೆ.
ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದೆ ಇದಕ್ಕೆಲ್ಲ ಕಾರಣ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.
ಗುಣಮಟ್ಟವಿಲ್ಲದ ಬಿತ್ತನೆ ಆಲೂಗಡ್ಡೆಯ ಮಾರಾಟಕ್ಕೆ ಕಡಿವಾಣ ಹಾಕಲು ನೀವು ಏಕೆ ವಿಫಲರಾಗಿದ್ದೀರಿ? ಇಂತಹ ದಂಧೆಯಲ್ಲಿ ತೊಡಗಿರುವ ವರ್ತಕರ ವಿರುದ್ಧ ಈವರೆಗೆ ಏನು ಕ್ರಮ ಕೈಗೊಂಡಿದ್ದೀರಿ? ಎಷ್ಟು ದಾಳಿ ನಡೆಸಿದ್ದೀರಿ? ತೋಟಗಾರಿಕೆ ಇಲಾಖೆಯ ಅಧಿಕಾರಿಯನ್ನು ಎಂದು ಪ್ರಶ್ನೆ ಮಾಡಿದರು.
ಅರಣ್ಯ ಇಲಾಖೆಯವರು ಗಡಿ ಭಾಗದ ಗ್ರಾಮಗಳಲ್ಲಿ ರೈತರಿಗೆ ವಿನಾಕಾರಣ ತೊಂದರೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕ ಆಡಳಿತದಿಂದ ನೀಡಿರುವಂತಹ ಸಾಗುವಳಿ ಚೀಟಿಯನ್ನು ಧಿಕ್ಕರಿಸಿ, ಈ ಜಾಗ ಅರಣ್ಯಕ್ಕೆ ಸಂಬಂಧಿಸಿದ ಎಂದು ವಿನಾಕಾರಣ ತೊಂದರೆ ನೀಡುತ್ತಿರುವುದು ಸರಿಯಲ್ಲ ಹಾಗೂ ಅವರನ್ನು ಏಕವಚನದಲ್ಲಿ ಮಾತನಾಡುತ್ತಿದ್ದೀರಾ,ರೈತರಿಗೆ ಮೊದಲು ಗೌರವ ಕೊಡುವುದನ್ನು ಕಲಿಯಬೇಕು ಎಂದರು.
ರೈತರು ಉಳಿಮೆ ಮಾಡುವ ಜಾಗ ನಿಮ್ಮದಾಗಿದ್ದರೆ ಮೊದಲು ತಾಲೂಕು ಆಡಳಿತವನ್ನು ಸಂಪರ್ಕಿಸಿ ಜಂಟಿ ಸರ್ವೆ ನಡೆಸಿ,ನಿಮ್ಮದಾದರೆ ನಿಮ್ಮ ಜಾಗವನ್ನು ಉಳಿಸಿಕೊಳ್ಳಿ ಇಲ್ಲವಾದರೆ ರೈತರಿಗೆ ಬಿಟ್ಟು ಕೊಡಿ ಅದನ್ನು ಬಿಟ್ಟು ರೈತರ ಮೇಲೆ ದಬ್ಬಾಳಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್,ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ