ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ, ಏಪ್ರಿಲ್ ಮೂರಕ್ಕೆ ಈಶ್ವರಪ್ಪ ದೆಲ್ಲಿಗೆ.
(SHIVAMOGA): ಶಿವಮೊಗ್ಗದಲ್ಲಿ ಭಾರಿ ಸಂಚಲನ ಮೂಡಿಸುತ್ತಿರುವ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾದ ಈಶ್ವರಪ್ಪನವರು ಇದೀಗ ಅಮಿತ್ ಷಾ ಬುಲಾವ್ ಹಿನ್ನೆಲೆಯಲ್ಲಿ ಈಶ್ವರಪ್ಪ ಏಪ್ರಿಲ್ 3 ರ ಬುಧವಾರ ದಿಲ್ಲಿಗೆ ತೆರಳಲಿದ್ದಾರೆ.
ಸೋಮವಾರ ಈಶ್ವರಪ್ಪ ಅವರಿಗೆ ಕರೆ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ತಕ್ಷಣ ದಿಲ್ಲಿಗೆ ಬರಲು ಷಾ ಮನವಿ ಮಾಡಿದ್ದಾರೆ. ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಜ್ಜಾಗಿರುವ ಈಶ್ವರಪ್ಪ ನನ್ನ ಮಗ ಕಾಂತೇಶ್ ಗೆ ಹಾವೇರಿಯಲ್ಲಿ ಟಿಕೆಟ್ ತಪ್ಪಿಸಿದ್ದಾರೆ, ನಾನು ಶಿವಮೊಗ್ಗದಲ್ಲಿ ಸ್ಪರ್ಧಿಸಿ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸುತ್ತೇನೆ ಅಂತ ಪ್ರತಿಜ್ಞೆ ಮಾಡಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೋರಾಗಿದೆ ತನ್ನ ಅಭಿಮಾನಿಗಳು ಹಾಗೂ ಕ್ಷೇತ್ರದ ಎಲ್ಲಾ ಕಾರ್ಯಕರ್ತರ ಬಳಿ ತನ್ನ ಪರ ನಿಲ್ಲುವಂತೆ ಕ್ಷೇತ್ರದಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಸದ್ದು ಜೋರಾಗಿದಕ್ಕೂ? ಅಮಿತ್ ಶಾ ಅವರಿಂದ ಕರೆ ಬಂದಿದೆ.
ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ನಾಯಕರು, ಇದೇ ಕಾರಣಕ್ಕಾಗಿ ಸೋಮವಾರ ಈಶ್ವರಪ್ಪ ಅವರಿಗೆ ಕರೆ ಮಾಡಿದ ಅಮಿತ್ ಷಾ ದಿಲ್ಲಿಗೆ ಬರುತ್ತೇನೆ. ಅದರೆ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ, ಗೆದ್ದು ಬಿಜೆಪಿಗೇ ಮರಳುತ್ತೇನೆ ನಿಮ್ಮ ಬೆಂಬಲ ಇರಲಿ ಅಂತ ಅಮಿತ್ ಷಾ ಅವರಿಗೆ ಹೇಳಿದ ಈಶ್ವರಪ್ಪ, ದಿಲ್ಲಿಗೆ ಬಂದಾಗ ಇಲ್ಲಿ ಏನೇನಾಗಿದೆ ಅಂತ ಹೇಳುತ್ತೇನೆ ಎಂದಿರುವ ಈಶ್ವರಪ್ಪ.
ವರದಿ: ರಾಘವೇಂದ್ರ ತಾಳಗುಪ್ಪ