ನಾಲ್ಕು ಗೋಡೆಗಳ ಮದ್ಯೆ ಅಭಿವೃದ್ಧಿ ವಿಶ್ಲೇಷಣೆ ಸಮಂಜಸವಲ್ಲ: ಸತ್ಯನಾರಾಯಣ
(KOLARA): ಬಂಗಾರಪೇಟೆ :ನಾಲ್ಕು ಗೋಡೆಗಳ ಮಧ್ಯದಲ್ಲಿ ಆಡಳಿತ ನಡೆಸುವುದು ಸಮಂಜಸವಲ್ಲ ಹಾಗೂ ಪಟ್ಟಣದ ಅಭಿವೃದ್ಧಿಯನ್ನು ವಿಶ್ಲೇಷಣೆ ಮಾಡುವುದೂ ಸೂಕ್ತವಲ್ಲ, ಈ ಹಿನ್ನೆಲೆಯಲ್ಲಿ ಪಟ್ಟಣದ ಜನರ ಸಮಸ್ಯೆಗಳನ್ನು ತಿಳಿಯುವ ಉದ್ದೇಶದಿಂದ ಪ್ರತಿಯೊಂದು ವಾರ್ಡ್ ಗಳಿಗೆ ಭೇಟಿ ನೀಡಲಾಗುತ್ತಿದೆ ಎಂದು ಪುರಸಭಾ ಮುಖ್ಯ ಅಧಿಕಾರಿ ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಪಟ್ಟಣದ ವಿವೇಕಾನಂದ ನಗರ ಬಡಾವಣೆಗೆ ದಿಢೀರ್ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಕುದ್ದು ಆಲಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಜ್ಯಾವ್ಯಾಪೀ ಡೆಂಘೀ ಪ್ರಮಾಣ ಹೆಚ್ಚಾಗುತ್ತಿದ್ದು ಬಂಗಾರಪೇಟೆ ಪುರಸಭೆ ಮುಂಜಾಗ್ರತ ಕ್ರಮವಾಗಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಇದರೊಟ್ಟಿಗೆ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಇದ್ದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.
ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪುರಸಭೆ ಬದ್ಧವಾಗಿದ್ದು ಪ್ರತಿಯೊಂದು ವಾರ್ಡ್ನಲ್ಲೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ, ಜನರಿಗೆ ಮೂಲಭೂತವಾಗಿ ಬೇಕಾಗಿರುವಂತಹ ವಿದ್ಯುತ್ ದೀಪ, ಕಸ ವಿಲೇವಾರಿ, ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಯನ್ನು ಪುರಸಭೆ ಮಾಡಲಾಗುತ್ತಿದೆ, ಕೆಲವು ಪ್ರದೇಶಗಳಲ್ಲಿ ಒಳಚರಂಡಿ ಸಮಸ್ಯೆ ಇದ್ದು ಅದನ್ನು ಅತಿ ಶೀಘ್ರದಲ್ಲಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಇಂಜಿನಿಯರ್ ರವಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ವಿಷ್ಣು ಕೋಲಾರ