ಕ್ರೈಂ ನ್ಯೂಸ್ಚಿಕ್ಕಮಗಳೂರು

ಆನೆ ದಾಳಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿ

ಆನೆ ದಾಳಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿ

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನ ಕೊಪ್ಪ ಗ್ರಾಮ ಪಂಚಾಯಿತಿಯ ಆರಂಬಳ್ಳಿ ಅರಣ್ಯದಲ್ಲಿ ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

ಒಂಟಿ ಸಲಗಕ್ಕೆ ವೃದ್ಧರೊಬ್ಬರು ಸಿಲುಕಿ ಭೀಕರವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮನೆಯ ಹಿಂದೆ ಇದ್ದಂತ ಕಾಡಿಗೆ ಹೋದ ವೇಳೆ ಈ ಘಟನೆ ನಡೆದಿದೆ. ಎಕ್ಕಡಬೈಲು ನಿವಾಸಿ ಎಲಿಯಾಸ್ (64) ಕಾಡಾನೆ ದಾಳಿಗೆ ಬಲಿಯಾದ ವೃದ್ಧ.

ಅಪ್ಪ ಮಗ ಇಬ್ಬರು ಕಾಡಿಗೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು ಮಗ ವರ್ಗೀಸ್ ಒಂಟಿ ಸಲಗ ದಿಂದ ಪಾರಾಗಿದ್ದಾನೆ. ತಾಲೂಕಿನಲ್ಲಿ ಇದೀಗ ಎರಡನೇ ಬಲಿ ಪಡೆದುಕೊಂಡಿದೆ. ಕೊಪ್ಪ ಅರಣ್ಯ ವ್ಯಾಪ್ತಿಯಲ್ಲಿ ಇರುವ ಆರಂಬಳ್ಳಿ ಅರಣ್ಯದಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

Scan the code