News & Updatesಚಿಕ್ಕಮಗಳೂರುನ್ಯೂಸ್

ಅಚ್ಚುಕಟ್ಟಾಗಿ ಸಾಗುವಾನಿ ಮರಗಳನ್ನು ಕಡಿದು ನಾಟ ಮಾಡಿಟ್ಟಿದ್ದ ಇಬ್ಬರ ಬಂಧನ

ಅಚ್ಚುಕಟ್ಟಾಗಿ ಸಾಗುವಾನಿ ಮರಗಳನ್ನು ಕಡಿದು ನಾಟ ಮಾಡಿಟ್ಟಿದ್ದ ಇಬ್ಬರ ಬಂಧನ

(CHIKKAMAGALURU): ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ದೇವದಾನ್ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ನಾಲ್ಕು ಸಾಗುವಾನಿ ಮರಗಳನ್ನೂ ಕಳವು ಮಾಡಿ ನಾಟಾ ಸಂಗ್ರಹ ಮಾಡಿದ್ದ ಇಬ್ಬರು ಆರೋಪಿಗಳಾದ ದೇವದಾನ್ ಎಸ್ಟೇಟ್‌ನ ಸೂಪರ್‌ವೈಸರ್ ಎ.ಎ.ಇಲಿಯಾಸ್ ಮತ್ತು ರೈಟರ್ ಸಿ.ಜೆ.ರಿನೋ ಎಂಬುವವರನ್ನು ಮಂಗಳವಾರ ಮಾಲು ಸಮೇತ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಇಬ್ಬರು ಆರೋಪಿಗಳು ದೇವದಾನ್ ಮೀಸಲು ಅರಣ್ಯದ ಸರ್ವೇ ನಂಬರ್ 343ರಲ್ಲಿ ನಾಲ್ಕು ಸಾಗುವಾನಿ ಮರಗಳನ್ನು ಕಟಾವು ಮಾಡಿ, 31 ಸೈಜ್ ನಾಟಾವನ್ನು ತಯಾರಿಸಿ, 14 ರೌಂಡ್ ಲಾಗ್‌ಗಳನ್ನು ಮಾಡಿದ್ದರು.


ಅರಣ್ಯ ಇಲಾಖೆ ಸಿಬ್ಬಂದಿ ಮೀಸಲು ಅರಣ್ಯದಲ್ಲಿ ತಮ್ಮ ಕಾರ್ಯಾಚರಣೆಯ ವೇಳೆ ಸಾಗುವಾನಿ ಮರಗಳನ್ನು ಕಟಾವು ಮಾಡಿರುವುದನ್ನು ಕಂಡುಬಂದಿದ್ದು. ಇದರ ಜಾಡು ಹಿಡಿದು ಹೋದಾಗ ಸ್ಥಳೀಯ ಎಸ್ಟೇಟ್‌ನಲ್ಲಿ ಸೂಪರ್‌ವೈಸರ್, ರೈಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇಲಿಯಾಸ್, ರಿನೋ ಅವರು ಮರವನ್ನು ಕಡಿತಲೆ ಮಾಡಿರುವ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಹಾಗು ಆರೋಪಿಗಳಿಂದ 2.381 ಕ್ಯೂಬಿಕ್ ಮೀಟರ್ ಸಾಗುವಾನಿ ಮರದ ನಾಟಾ ತುಂಡುಗಳನ್ನು ಹಾಗೂ ಮರ ಕೊಯ್ಯಲು ಬಳಸಿದ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ಕಟಾವು ಮಾಡಿರುವ ಮರದಲ್ಲಿ ತಯಾರಿಸಿದ್ದ 31ಸೈಜ್ ನಾಟಾವನ್ನು ತಮ್ಮ ಮನೆಯಲ್ಲಿ ಉಳಿದ ರೌಂಡ್ ಲಾಗ್‌ಗಳನ್ನು ಅರಣ್ಯ ಪ್ರದೇಶದಲ್ಲಿ ಸಂಗ್ರಹಿಸಿಟ್ಟಿದ್ದರು.

ಜೊತೆಗೆ ಆರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಆರ್‌ಎಫ್‌ಓ ಎಂ. ಸಂದೀಪ್ ಮಾಹಿತಿ ನೀಡಿದ್ದಾರೆ. ಈ ಸಾಗುವಾನಿ ಮರಗಳು 4 ಲಕ್ಷ ರೂ.ಗಳಿಗೂ ಅಧಿಕವಾಗಿ ಬೆಲೆ ಬಾಳುವ ಮರಗಳಾಗಿವೆ.
ಎಸಿಎಫ್ ಚೇತನ್ ಮಂಗಲ್ ಗಸ್ತಿ ಮಾರ್ಗದರ್ಶನದಲ್ಲಿ ಸಂಗಮೇಶ್ವರಪೇಟೆ ಡಿಆರ್‌ಎಫ್‌ಓ ಮಂಜುನಾಥ್, ಸಿಬ್ಬಂದಿಗಳಾದ ಹನುಮಂತ ಲೋನಿ, ಕಾರ್ತಿಕ್, ಚಾಲಕ ಪ್ರಕಾಶ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Scan the code