ಆರ್ಯವೈಶ್ಯ ಮಹಾಜನ ಕಮಿಟಿ ನೇತೃತ್ವದಲ್ಲಿ ನಗರೇಶ್ವರ ದೇವರ ಬ್ರಹ್ಮ ರಥೋತ್ಸವ.
(SHIVAMOGA): ಸಾಗರ ಪಟ್ಟಣದ ಎಸ್ಪಿಎಂ ರಸ್ತೆಯಲ್ಲಿರುವ ಶ್ರೀ ನಗರೇಶ್ವರ ದೇವಸ್ಥಾನದಲ್ಲಿ ಮೇ 15 ರಂದು ಬ್ರಹ್ಮ ಕಲಶೋತ್ಸವ ನಡೆಯಲಿದೆ.
ನಗರದ ಆರ್ಯವೈಶ್ಯ ಮಹಾಜನ ಕಮಿಟಿ ನೇತೃತ್ವದಲ್ಲಿ ನಡೆಯುವ ಶ್ರೀ ನಗರೇಶ್ವರ ದೇವರ ಬ್ರಹ್ಮ ರಥೋತ್ಸವವು ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಇದದ ಅಂಗವಾಗಿ ಮಧ್ಯಾಹ್ನ ಸಾರ್ವಜನಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ರಾಘವೇಂದ್ರ ತಾಳಗುಪ್ಪ