ಜಿಲ್ಲೆನ್ಯೂಸ್

ಮಂಡ್ಯದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ವಿದ್ಯಾರ್ಥಿನಿಯಲದ ಮೇಲೆ ದಾಳಿ: ಆರೋಪಿಗಳ ಬಂಧನಕ್ಕೆ ತಾಲೂಕು ಕುರುಬ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಒತ್ತಾಯ

ಮಂಡ್ಯದಲ್ಲಿ ಬಿಜೆಪಿ ಪಾದಯಾತ್ರೆ ವೇಳೆ ವಿದ್ಯಾರ್ಥಿನಿಯಲದ ಮೇಲೆ ದಾಳಿ: ಆರೋಪಿಗಳ ಬಂಧನಕ್ಕೆ ತಾಲೂಕು ಕುರುಬ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಒತ್ತಾಯ


(KOLARA): ಬಂಗಾರಪೇಟೆ : ಕೆರಗೋಡು ಹನುಮಧ್ವಜ ವಿವಾದ ಘಟನೆ ಸಂಬಂಧ ಬಿಜೆಪಿ ಸಂಘಪರಿವಾರದವರು ನಡೆಸಿದ ಪಾದಯಾತ್ರೆ ವೇಳೆ ಕಿಡಿಗೇಡಿಗಳು ಕುರುಬ ಸಂಘದ ವಿದ್ಯಾರ್ಥಿನಿಲಯದ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿ ಭಾರೀ ಹಾನಿಯನ್ನುಂಟು ಮಾಡಲಾಗಿದೆ. ರಾಜ್ಯ ಸರಕಾರ ವಿದ್ಯಾರ್ಥಿನಿಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಸಂಘಪರಿವಾರದ ಮುಖಂಡರನ್ನು ಕೂಡಲೇ ಬಂಧಿಸಬೇಕು. ತಪ್ಪಿದಲ್ಲಿ ಸಂಘದಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಲ್ ರಾಮಕೃಷ್ಣಪ್ಪ ಎಚ್ಚರಿಸಿದರು.

ಇಂದು ಮಧ್ಯಾಹ್ನ 2 ಗಂಟೆಯಲ್ಲಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ರಂಗಮಂದಿರದಲ್ಲಿ ಗೌರಿ ಶಂಕರ ಸೇವಾ ಟ್ರಸ್ಟ್ ಗೆ ನಾಡಧ್ವಜ ಹಾಗೂ ರಾಷ್ಟ್ರಧ್ವಜ ಹಾರಿಸಲು ಷರತ್ತಿನೊಂದಿಗೆ ಜಿಲ್ಲಾಡಳಿತ ಧ್ವಜಸ್ಥಂಭ ನಿರ್ಮಾಣಕ್ಕೆ ಅನುಮತಿ ನೀಡಿದೆ. ಆದರೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಸ್ಥಳೀಯ ಜನರಿಗೆ ತಪ್ಪು ಮಾಹಿತಿ ನೀಡಿ ಇತ್ತೀಚೆಗೆ ಧ್ವಜ ಸ್ಥಂಭದಿಂದ ರಾಷ್ಟ್ರಧ್ವಜ ಕೆಳಗಿಳಿಸಿ ಹನುಮಧ್ವಜ ಹಾರಿಸಿ ಕಾನೂನು ಉಲ್ಲಂಘನೆ ಮಾಡುವ ಮೂಲಕ ಉದ್ದೇಶಪೂರ್ವಕವಾಗಿ ವಿವಾದ ಸೃಷ್ಟಿಸಿದ್ದಾರೆ. ಈ ಘಟನೆ ಸಂಬಂಧ ಬಿಜೆಪಿಯವರು ನಡೆಸಿದ ಪಾದಯಾತ್ರೆ ವೇಳೆ ಸಂಘಪರಿವಾರದ ಕಿಡಿಗೇಡಿಗಳು ಮಂಡ್ಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯದೊಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಲ್ಲು ಎಸೆದು ಭಾರೀ ಹಾನಿಯನ್ನುಂಟು ಮಾಡಿದ್ದಾರೆ.

ವಿದ್ಯಾರ್ಥಿನಿಲಯದೊಳಗಿದ್ದ ಕನಕದಾಸ, ಸಂಗೊಳ್ಳಿರಾಯಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲೆಯ ಕುರುಬರ ಸಂಘದ ನಿರ್ದೇಶಕ ಸಾತನೂರು ಮಹೇಶ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿ ಸಮುದಾಯದವರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಘಟನೆಯನ್ನು ಬಂಗಾರಪೇಟೆ ತಾಲ್ಲೂಕು ಕುರುಬರ ಸಂಘ ತೀವ್ರವಾಗಿ ಕಂಡಿಸುತ್ತದೆ. ಇನ್ನುಮುಂದೆ ಇಂತಹ ಕೃತ್ಯಗಳು ಮರುಕಳಿಸಿದರೆ ತೀವ್ರವಾದ ಹೋರಾಟ ಹಮ್ಮಿಕೊಳ್ಳಲಿದ್ದೇವೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಎಚ್ಚರಿಸಿದ್ದಾರೆ.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code