ಮಹಿಳೆಯರ ದಿನಾಚರಣೆ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಆಟೋಟ ಸ್ಪರ್ಧೆ.
(SHIVAMOGA): ಕಾವಂದರ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಗರ ತಾಲೂಕಿನ ಸಾಗರ ಯೋಜನಾ ಕಚೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರುಗಳು ಮತ್ತು ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಮ್ಯೂಸಿಕಲ್ ಚೇರ್ ಹಗ್ಗ ಜಗ್ಗಾಟ ತ್ರೋಬಾಲ್ ಏರ್ಪಡಿಸಿದ್ದು, ಮಧ್ಯಾಹ್ನದ ನಂತರ ಜನಪ್ರಿಯ ಶಾಸಕರಾದಂತಹ ಬೇಲೂರು ಗೋಪಾಲಕೃಷ್ಣ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಮಾಡುವುದರ ಮುಖಾಂತರ ಶುರು ಮಾಡಿದರು.
ಆಟದಲ್ಲಿ ಗೆದ್ದಂತಹ ಎಲ್ಲಾ ಸದಸ್ಯರಿಗೂ ಕೂಡ ಬಹುಮಾನವನ್ನು ವಿತರಣೆ ಮಾಡುವುದರ ಜೊತೆಗೆ ಮಹಿಳೆಯರ ಬಗ್ಗೆ ಮತ್ತು ಧರ್ಮಸ್ಥಳ ಸಂಸ್ಥೆಯ ಬಗ್ಗೆ ಹಿತನುಡಿಯನ್ನು ತಿಳಿಸಿದರು ಚದ್ರಿ ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಶಾಂತ ನಾಯಕ್ ಮತ್ತು ಯುನಿಟಿ ಕ್ಲಬ್ ನ ಗಿರೀಶ್ ಮತ್ತು ಪ್ರತೀಕ್ ನಡೆಸಿಕೊಟ್ಟರು ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ಸಾಗರ ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿಯದ ಗೌರಮ್ಮ ಇವರು ಯಶಸ್ವಿಯಾಗಿ ನಡೆಸಿಕೊಟ್ಟರು ಸರ್ವ ಸದಸ್ಯರು ಕೂಡ ಭಾಗವಹಿಸಿದ್ದರು.
ವರದಿ: ರಾಘವೇಂದ್ರ ತಾಳಗುಪ್ಪ