ನ್ಯೂಸ್ರಾಜಕೀಯಶಿವಮೊಗ್ಗ

ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ಹ್ಯಾಟ್ರಿಕ್‌ ಗೆಲುವು

ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರ ಹ್ಯಾಟ್ರಿಕ್‌ ಗೆಲುವು

(SHIVAMOGA): ಶಿವಮೊಗ್ಗ : ಬಾರೀ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರ ವಿರುದ್ದ 1.80 ಲಕ್ಷ ಮತಗಳ ಭಾರಿ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮತ ಏಣಿಕೆಯ ಮೊದಲ ಸುತ್ತಿನಿಂದಲೇ ಮುನ್ನಡೆ ಕಾಯ್ದಕೊಂಡು ಬಂದ ಅವರು, ಕೊನೆಯ ಸುತ್ತಿನ ತನಕವೂ ಅದೇ ಅಂತರ ಕಾಯ್ದುಕೊಂಡು ಬರುವ ಮೂಲಕ ಗೆಲುವಿನ ನಗೆ  ಬೀರಿದರು. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಸತತ ಎರಡನೇ ಬಾರಿಗೂ ಸೋಲಿನ ರುಚಿ ಕಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್.‌ ಈಶ್ವರಪ್ಪ ಅವರಿಗೆ ತೀವ್ರ ಮುಖಭಂಗ ಉಂಟಾಗಿದೆ.
ಬಿ.ವೈ ರಾಘವೇಂದ್ರ ಈ ಬಾರಿ ಗೆಲುವು ಕಂಡರೆ ಕೇಂದ್ರ ಸಚಿವರಾಗುತ್ತಾರೆಂಬ ಮಾತು ಈ ಹಿಂದಿನಿಂದಲೂ ಕೇಳಿ ಬರುತ್ತಿತ್ತು ಜಿದ್ದಾಜಿದ್ದಿಯ ಕಣದಲ್ಲಿ  ಬಿ.ವೈ. ರಾಘವೇಂದ್ರ ಅವರು ಈಗ ಸತತ ಮೂರನೇ ಬಾರಿಗೆ ಸಂಸತ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದು, ಕೇಂದ್ರ ಸಚಿವರಾಗುತ್ತಾರೆ ಎಂದು ಎಲ್ಲೆಡೆ ಕೇಳಿ ಬರುತ್ತಿದೆ.

ವರದಿ: ಸಂದೀಪ ಯು.ಎಲ್ ಸೊರಬ

Leave a Reply

Your email address will not be published. Required fields are marked *

Scan the code