ಬಕ್ರೀದ್ ಹಾಗು ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ಯನ್ನು ನಿಷೇದಿಸಲು ಜಿಲ್ಲಾದಿಕಾರಿಗಳಲ್ಲಿ ಮನವಿ ಮಾಡಿಕೊಂಡಿರುವ ಬಜರಂಗ ದಳ..!
(SHIVAMOGA): ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಹಾಗೆಯೇ ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ಮನವಿ ಜಿಲ್ಲಾದಿಕಾರಿಗಳಲ್ಲಿ ಬಜರಂಗ ದಳವು ಮನವಿಮಾಡಿಕೊಂಡಿರುತ್ತಾರೆ .
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ ( ಯಾವುದೇ ರೀತಿಯ ಹತ್ಯೆ ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲಿಗೆ ಅವಕಾಶವಿದೆ. ರಾಜ್ಯದಲ್ಲಿ ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ ) ನಿಷೇಧವಿರುತ್ತದೆ.
ಸುಪ್ರೀಂ ಕೋರ್ಟ್ WP ( Civil ) 309:2003 ದಿನಾಂಕ 30.01.2014 ರ ತೀರ್ಪಿನ ಆದೇಶ ದಿನಾಂಕ 06.01.2009 WP 1443 / 2008 ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ಟಾಗಿ ತಡೆಯಲು ವಿಶ್ವ ಬಜರಂಗ ದಳ ಈ ಕೆಳಕಂಡಂತೆ ಮನವಿ ಮಾಡಿಕೊಂಡಿದೆ.
ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ಬಕ್ರೀದ್ ವರೆಗೂ ನಾಕಾಬಂದಿ ಹಾಕಬೇಕು. ಬಕ್ರೀದ್ ವರೆಗೆ ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು. ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಹಿಂದೆ ನಡೆದಲೆಲ್ಲ ನಿಗಾ ಇಡುತ್ತಾ, ಪ್ರಾರ್ಥನಾ ಮಂದಿರಗಲ್ಲಿಯೂ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಲು ಸೂಚಿಸಬೇಕು.
ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಮೊದಲೇ ಪೊಲೀಸರು ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು.
ಈ ಎಲ್ಲ ಕಾರ್ಯಗಳಲ್ಲಿ ಕಾನೂನುಭದ್ರವಾಗಿ ತಮಗೆ ಸಹಕರಿಸಲು ನಮ್ಮ ಕಾರ್ಯಕರ್ತರು ಸದಾ ಸಿದ್ಧರಿದ್ದಾರೆ. ಎಂದು ಬಜರಂಗದಳ ಜಿಲ್ಲಾಧಿಕಾರಿಗಳು ಶಿವಮೊಗ್ಗ ಇವರಲ್ಲಿ ಮಾನವಿ ಮಾಡಿಕೊಂಡಿದ್ದಾರೆ.
ವಿಭಾಗ ಸಂಯೋಜಕರು ರಾಜೇಶ್ ಗೌಡ ,ಜಿಲ್ಲಾ ಸಹ ಸಂಯೋಜಕರು ಅಂಕುಶ್. ಸುರೇಶ್ ಬಾಬು ,ನಗರ ಸಂಯೋಜಕ್ ನಾಗೇಶ್ , ಧರ್ಮಪ್ರಸಾರ ಪ್ರಮುಖ್ ಜಿತೇಂದ್ರ ಗೌಡ .ಇವರುಗಳ ಸಮ್ಮುಕದಲ್ಲಿ ಮನವಿ ಮಾಡಲಾಗಿದೆ.