LatestNews & Updatesಶಿವಮೊಗ್ಗ

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು.

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು.



(ಶಿವಮೊಗ್ಗ) : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ (36) ಮೃತ ದುರ್ಧೈವಿಯಾಗಿದ್ದಾರೆ.

ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

Scan the code