ಉಪತಹಶಿಲ್ದಾರ್ ರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಅನಾರೋಗ್ಯದಿಂದ ಸಾವು.
(KOLARA): ಬಂಗಾರಪೇಟೆ ಪಟ್ಟಣದ ತಾಲೂಕು ಕಚೇರಿಯಲ್ಲಿ ಉಪತಹಶಿಲ್ದಾರ್ ರಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಅನಾರೋಗ್ಯದಿಂದ ಸಾವು
ಪಟ್ಟಣದ ತಾಲೂಕು ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಉಪ ತಹಶಿಲ್ದಾರ್ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ 1:00 ಗಂಟೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ದುರ್ದೇವಿ ಚಂದ್ರಶೇಖರ್ ಅವರು ಪಟ್ಟಣದ ತಾಲೂಕು ಕಚೇರಿಯಲ್ಲಿ ಉಪತಹಶಿಲ್ದಾರ್ ರಾಗಿ ಸುಮಾರು ಐದು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಎರಡು ದಿನಗಳ ಹಿಂದೆ ಕಿಡ್ನಿ ವೈಫಲ್ಯ ದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಮಧ್ಯಾಹ್ನ 1:00 ಯಲ್ಲಿ ನಿಧನರಾಗಿದ್ದಾರೆ ಎಂದು ತಹಶೀಲ್ದಾರ್ ರಶ್ಮಿ ರವರು ತಿಳಿಸಿದ್ದಾರೆ.
ವರದಿ: ವಿಷ್ಣು ಕೋಲಾರ