ದೇಶನ್ಯೂಸ್

ಬಾಂಗ್ಲಾದಲ್ಲಿನ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ : ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ.

ಬಾಂಗ್ಲಾದಲ್ಲಿನ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ : ಹಿಂದೂ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ.

(SHIVAMOGA): ಸಾಗರ-ಬಾಂಗ್ಲಾದೇಶದಲ್ಲಿ ಹಿಂದಿನ ಪ್ರಧಾನಿಯವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೇರಿರುವ ಮಧ್ಯಂತರ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಮತಾಂಧ ಶಕ್ತಿಗಳು ನಡೆಸುತ್ತಿರುವ ದೌರ್ಜನ್ಯ, ಮನೆ-ಮಠ, ಶ್ರದ್ಧಾಕೇಂದ್ರ, ಧಾರ್ಮಿಕ ಕೇಂದ್ರಗಳ ಮೇಲೆ ನಡೆಸುತ್ತಿರುವ ದಾಳಿಗಳು, ಕೊಲೆ ಸುಲಿಗೆ ಅತ್ಯಂತ ಅಮಾನವೀಯವಾಗಿದೆ. ಇದನ್ನು ಖಂಡಿಸಿ, ಅಲ್ಲಿನ ಹಿಂದೂಗಳಿಗೆ ಆತ್ಮಸ್ಥೈರ್ಯ ತುಂಬಲು ಡಿಸೆಂಬರ್. 4ರಂದು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ವಿಶ್ವಹಿಂದೂಪರಿಷತ್ ಜಿಲ್ಲಾಧ್ಯಕ್ಷೆ ಪ್ರತಿಮಾ ಜೋಗಿ ತಿಳಿಸಿದ್ದಾರೆ.


ಬಾಂಗ್ಲಾದಲ್ಲಿ ಇತ್ತೀಚೆಗೆ ಇಸ್ಕಾನ್ ದೇವಸ್ಥಾನದ ಸಂತ ಚಿನ್ಮಯ್ ಕೃಷ್ಣ ಪ್ರಭು ಅವರನ್ನು ಬಂಧಿಸಿರುವ ಸರಕಾರದ ಕ್ರಮ ಖಂಡಿಸಿ, ಅಲ್ಲಿರುವ ಅಲ್ಪಸಂಖ್ಯಾತ ಹಿಂದುಗಳಿಗೆ ಆತ್ಮಸ್ಥೈರ್ಯ ತುಂಬಲು ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 11ಗಂಟೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪಟ್ಟಣದ ಮಹಾಗಣಪತಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ವೃತ್ತದಲ್ಲಿ ಸಭೆ ನಡೆಸಿ, ಉಪವಿಭಾಗಾಧಿಕಾರಿಯವರಿಗೆ ಮನವಿ ಸಲ್ಲಿಸಲಾಗುತ್ತದೆ. ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ವರದಿ: ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code