ಚಿಕ್ಕಮಗಳೂರುನ್ಯೂಸ್

ರೈತರಿಗೆ ಬೆಳೆ ವಿಮೆ ಪರಿಹಾರ ಪಾವತಿ: ಸಂಕಷ್ಟದಲ್ಲಿ ವರದಾನ

ರೈತರಿಗೆ ಬೆಳೆ ವಿಮೆ ಪರಿಹಾರ ಪಾವತಿ: ಸಂಕಷ್ಟದಲ್ಲಿ ವರದಾನ


(CHIKKAMAGALURU): ಬಾಳೆಹೊನ್ನೂರು: ಕೇಂದ್ರ ಸರ್ಕಾರದ ಫ್ರಧಾನ ಮಂತ್ರಿ ಫಸಲ್ ಭೀಮಾ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ನೋಂದಾಯಿಸಿಕೊoಡು ಹಣ ಕಟ್ಟಿದ ರೈತರಿಗೆ ಇದೀಗ ಬೆಳೆ ವಿಮಾ ಪರಿಹಾರ ಪಾವತಿಯನ್ನು ಮಾಡುತ್ತಿದ್ದು, ಸಂಕಷ್ಟದಲ್ಲಿರುವ ರೈತರಿಗೆ ವರದಾನ ನೀಡಿದಂತಾಗಿದೆ ಎಂದು ಪಿಎಸಿಎಸ್ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ರೈತರ ಅಭ್ಯುದಯಕ್ಕಾಗಿ ಅವರು ಸಂಕಷ್ಟದಲ್ಲಿರುವ ಸಮಯದಲ್ಲಿ ಉಪಯೋಗಕ್ಕೆ ಬರಲಿ ಎಂದು ಸದುದ್ದೇಶದಿಂದ ಆರಂಭಿಸಿರುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ಮಲೆನಾಡಿನ ರೈತರಿಗೆ ಇದೀಗ ಸಾಕಷ್ಟು ರೀತಿಯಲ್ಲಿ ಉಪಯೋಗಕ್ಕೆ ಬರುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿ.ಎಂ.ಉಮೇಶ್ ಕಲ್ಮಕ್ಕಿ


ಕಳೆದ ವರ್ಷ ಅಡಕೆ, ಕಾಳು ಮೆಣಸು ಬೆಳೆಗಳಿಗೆ ವಿಮೆ ಕಟ್ಟಿದ ರೈತರಿಗೆ ಈ ಬಾರಿ ಸರ್ಕಾರದ ನಿರ್ದೇಶನದಂತೆ ವಿಮಾ ಪರಿಹಾರ ದೊರೆಯುತ್ತಿರುವುದು, ಹಲವು ಸಂಕಷ್ಟಗಳಲ್ಲಿ ಸಿಲುಕಿರುವ ರೈತರಿಗೆ ಉಪಯೋಗಕಾರಿಯಾಗಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದ ಸಣ್ಣ, ಮದ್ಯಮ ವರ್ಗದ ರೈತ ಕುಟುಂಬಗಳಿಗೆ ವಿಮಾ ಪರಿಹಾರ ಮೊತ್ತ ಖಾತೆಗೆ ಪಾವತಿಯಾಗುತ್ತಿರುವುದು ಆರ್ಥಿಕ ಸಮಸ್ಯೆಗಳನ್ನು ನೀಗಿಸಲು ಸಹಕಾರಿಯಾಗಿದೆ.
ಕೇಂದ್ರ ಸರ್ಕಾರದ ರೈತ ಉಪಯೋಗಿ ಕಾರ್ಯಕ್ರಮಗಳು ಈ ಮೂಲಕ ಪ್ರತಿಯೊಬ್ಬ ರೈತ ಕುಟುಂಬಕ್ಕೆ ತಲುಪುತ್ತಿದ್ದು, ಕೇಂದ್ರ ಸರ್ಕಾರದ ಕುರಿತು ರೈತರಲ್ಲಿ ಆಶಾಭಾವನೆ ಮೂಡಿಸಿದೆ ಎಂದು ಹೇಳಿದ್ದಾರೆ.


ಬಿವೈವಿ ನೇಮಕ ಸಮಯೋಚಿತ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದು ಸಮಯೋಚಿತವಾಗಿದ್ದು, ರಾಜ್ಯ ಬಿಜೆಪಿಗೆ ಬೂಸ್ಟರ್ ಡೋಸ್ ನೀಡಿದಂತಾಗಿದೆ ಎಂದು ಬಿಜೆಪಿ ಮುಖಂಡ ಟಿ.ಎಂ.ಉಮೇಶ್ ಕಲ್ಮಕ್ಕಿ ಹೇಳಿದ್ದಾರೆ.
ವಿಜಯೇಂದ್ರ ಅವರ ನೇಮಕದಿಂದ ಯುವಕರು, ಕಾರ್ಯಕರ್ತರಿಗೆ ಬಲ ಬಂದoತಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಹೆಚ್ಚಿನ ಸ್ಥಾನ ಗಳಿಸಲು ಅನುಕೂಲವಾಗಿದೆ ಎಂದು ಹೇಳಿದ್ದಾರೆ.

ಕಾಂಬೋಡಿಯಾಕ್ಕೆ ಉದ್ಯೋಗಕ್ಕೆ ತೆರಳಿ ಸಂಕಷ್ಟಕ್ಕೀಡಾಗಿದ್ದ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದ ಯುವಕ ಅಶೋಕ್‌ನನ್ನು ವಾಪಾಸ್ ಕರೆತರಲು ಸಹಕರಿಸಿದ ಬಿಜೆಪಿ ಮುಖಂಡ ಟಿ.ಎಂ.ಉಮೇಶ್ ಅವರನ್ನು ಯುವಕನ ಕುಟುಂಬಸ್ಥರು ಸನ್ಮಾನಿಸಿದರು. ಯುವಕ ಅಶೋಕ್, ಪೋಷಕರಾದ ಸುರೇಶ್, ಪ್ರೇಮಾ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

Scan the code