Newsಶಿವಮೊಗ್ಗ

ಸಿ.ಟಿ.ರವಿ ಹಾಗೂ ಸಂಸತ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅಮಿತ್ ಷಾ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ.

ಸಿ.ಟಿ.ರವಿ ಹಾಗೂ ಸಂಸತ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅಮಿತ್ ಷಾ ಅವರ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ.

(SHIVAMOGA): ಸಾಗರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಸಭ್ಯ ಪದ ಬಳಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಂಸತ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹೇಳಿಕೆಯನ್ನು ಖಂಡಿಸಿ ಮಂಗಳವಾರ ಬ್ಲಾಕ್ ಕಾಂಗ್ರೇಸ್ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಮಾತನಾಡುತ್ತ ಸಂಸತ್‌ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅಮಿತ್ ಷಾ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯವಾದದ್ದು. ಪ್ರಮಾಣ ವಚನ ಸ್ವೀಕರಿಸುವಾಗ ಸಂವಿಧಾನದ ಮೇಲೆ ಪ್ರಮಾಣ ಮಾಡುವ ನೀವುಗಳು ಅಧಿಕಾರ ಸಿಕ್ಕ ತಕ್ಷಣ ಸಂವಿಧಾನ ಶಿಲ್ಪಿ ವಿರುದ್ದವೇ ಅವಹೇಳನಕಾರಿಯಾಗಿ ಮಾತನಾಡುತ್ತಿರುವುದು ಖಂಡನೀಯ. ತಕ್ಷಣ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ರಾಷ್ಟ್ರಪತಿಗಳ ಮಧ್ಯಪ್ರವೇಶ ಮಾಡಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.


ವಿಧಾನ ಪರಿಷತ್ ಎಂದರೆ ಗೌರವ ಇದ್ದವರ ಮೇಲ್ಮನೆ ಎಂದು ಹೆಸರುವಾಸಿಯಾಗಿತ್ತು. ಆದರೆ ಸಿ.ಟಿ.ರವಿಯಂತಹ ಕೊಲೆಗಡುಕ ವಿಧಾನ ಪರಿಷತ್ ಸದಸ್ಯರಿಂದ ಮೇಲ್ಮನೆಗೆ ಕೆಟ್ಟ ಹೆಸರು ಬರುತ್ತಿದೆ. ಅತ್ಯಂತ ಗೌರವಾನ್ವಿತ ಮಹಿಳೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅತ್ಯಂತ ಅವಹೇಳನಾಕಾರಿಯಾಗಿ ಮಾತನಾಡಿರುವುದು ಖಂಡನೀಯ. ಬೆಂಕಿಹಚ್ಚುವ ಕೆಲಸವನ್ನು ಸಿ.ಟಿ.ರವಿ ಕೆಲಸ ಮಾಡುತ್ತಾರೆ. ಇಂತಹವರಿಂದ ರಾಜ್ಯಕ್ಕೆ ಕೆಟ್ಟಹೆಸರು ಬರುತ್ತಿದೆ. ತಕ್ಷಣ ಸಿ.ಟಿ.ರವಿ ಅವರನ್ನು ವಿಧಾನಪರಿಷತ್ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಹಿಳಾ ಕಾಂಗ್ರೇಸ್ ಜಿಲ್ಲಾಧ್ಯಕ್ಷೆ ಅನಿತಾಕುಮಾರಿ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷೆ ಜ್ಯೋತಿ ಕೋವಿ ಮಾತನಾಡಿದರು.
ನಗರ ಕಾಂಗ್ರೇಸ್ ಅಧ್ಯಕ್ಷ ಐ.ಎನ್.ಸುರೇಶಬಾಬು, ಪ್ರಮುಖರಾದ ಎಲ್.ಚಂದ್ರಪ್ಪ, ಷಣ್ಮುಖ, ಮಹಾಬಲ ಕೌತಿ, ಪ್ರಭಾವತಿ, ವಿಲ್ಸನ್ ಗೋನ್ಸಾಲ್ವಿಸ್, ಅನ್ವರ್ ಭಾಷಾ ಇನ್ನಿತರರು ಹಾಜರಿದ್ದರು.

ವರದಿ: ರಾಘವೇಂದ್ರ ತಾಳಗುಪ್ಪ

Leave a Reply

Your email address will not be published. Required fields are marked *

Scan the code