ಕೋಲಾರನ್ಯೂಸ್

ಪಂಚಾಯ್ತಿಯಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆಗೆ ಕರೆ.

ಪಂಚಾಯ್ತಿಯಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ಪ್ರತಿಭಟನೆಗೆ ಕರೆ.


(KOLARA): ಬಂಗಾರಪೇಟೆ: ಕೆ.ಜಿ.ಎಫ್, ಬಂಗಾರಪೇಟೆ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಅಕ್ರಮ ಖಾತೆಗಳನ್ನು ಸಿ.ಬಿ.ಐಗೆ ಒಪ್ಪಿಸಿ ಅಕ್ರಮ ಲೇಔಟ್‌ಗಳ ವಿರುದ್ದ ಕ್ರಿಮಿನಲ್ ಮೊಕದಮ್ಮೆ ದಾಖಲು ಮಾಡಬೇಕೆಂದು ನ-2 ರ ಗುರುವಾರ ಜಾನುವಾರುಗಳ ಸಮೇತ ತಾಲ್ಲೂಕು ಪಂಚಾಯಿತಿ ಮುತ್ತಿಗೆ ಹಾಕಲು ರೈಲ್ವೆ ನಿಲ್ದಾಣ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.



ಸರ್ಕಾರದ ಕೆಲಸ ದೇವರ ಕೆಲಸ ಜನ ಸಾಮಾನ್ಯರ ತೆರಿಗೆ ಹಣದಲ್ಲಿ ಲಕ್ಷ ಲಕ್ಷ ಸಂಬಳ ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಿಕೆ ಮಾಡಿ ಗ್ರಾಮೀಣ ಪ್ರದೇಶಗಳನ್ನು ಅಭಿವೃದ್ದಿ ಮಾಡಬೇಕಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಅಕ್ರಮ ದಾಖಲೆಗಳನ್ನು ಸೃಷ್ಟಿ ಮಾಡಿ ಕೋಟಿ ಕೋಟಿ ಹಣವನ್ನು ಲೂಟಿ ಮಾಡುವ ಇಲಾಖೆಗಳಾಗಿ ಮಾರ್ಪಟ್ಟಿರುವುದು ದುರದೃಷ್ಟಕರ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ ವಿಷಾದ ವ್ಯಕ್ತಪಡಿಸಿದರು.



ನರೇಗಾ ಕಾಮಗಾರಿಗಳಿಂದ ಹಿಡಿದು ರಸ್ತೆ, ಚರಂಡಿ, ಬೀದಿ ದೀಪ ಮನೆ ನಿರ್ಮಾಣಕ್ಕೆ ಬಿಡುಗಡೆಯಾಗುವ ಹಣ ಎಲ್ಲಿ ಹೋಗುತ್ತಿದೆ. ಪ್ರತಿ ವರ್ಷ ಕೋಟಿ ಕೋಟಿ ಹಣ ಮಾತ್ರ ಬಿಡುಗಡೆಯಾಗುತ್ತಿದೆ. ಅಭಿವೃದ್ದಿ ಮಾತ್ರ ಶೂನ್ಯವಾಗುತ್ತಿದೆ. ನೆಪ ಮಾತ್ರಕ್ಕೆ ಹಿರಿಯ ಅಧಿಕಾರಿಗಳು ಬೇಟಿ ನೀಡುತ್ತಾರೆಂಬ ಮಾಹಿತಿ ಇದ್ದರೆ, ಕೆಲವು ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ಆ ಪಂಚಾಯಿತಿಯ ವ್ಯಾಪ್ತಿಯ ರಸ್ತೆಗಳಿಗೆ ಸುಣ್ಣ ಬಣ್ಣ ಬಡಿದು ಸಿಂಗಪುರ್ , ಆಸ್ಟ್ರೇಲಿಯಾ ರೀತಿ ತೋರಿಸುವ ಚಾಳಿಯನ್ನು ಅಧಿಕಾರಿಗಳು ರೂಡಿಸಿಕೊಂಡಿದ್ದಾರೆ ಎಂದರು .



ಸಭೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷ ನಳಿನಿಗೌಡ, ಅಭಿಷೇಕ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಆಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಹ.ಸೇ.ಜಿ.ಅಧ್ಯಕ್ಷ ಕಿರಣ್, ಜಿಲ್ಲಾ ಉಪಾಧ್ಯಕ್ಷ ಚಾಂದ್‌ಪಾಷ, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ. ವಿಶ್ವ, ಮುನಿರಾಜು, ರಾಮಸಾಗರ ವೇಣು, ಸುರೇಶ್‌ಬಾಬು ಮಾಲೂರು ತಾ.ಅಧ್ಯಕ್ಷ ಯಲ್ಲಣ್ಣ, ಗೋವಿಂದಪ್ಪ, ಲಕ್ಷ್ಮಣ್, ಹರೀಶ್, ಮಂಗಸಂದ್ರ ತಿಮ್ಮಣ್ಣ, ಶೈಲಜ, ರೂಪಾದೇವಿ, ವೆಂಕಟಮ್ಮ, ರತ್ನಮ್ಮ ಮುಂತಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code