ಎಲ್ಲಾ ಶಾಲೆಗಳಿಗೆ ನಿಗದಿತ ಸಮಯದೊಳಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆ
(SHIVAMOGA): ಸಾಗರ: ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ನಿಗದಿತ ದಿನಾಂಕದೊಳಗೆ ಪಠ್ಯಪುಸ್ತಕ ಹಾಗೂ ಸಮವಸ್ತçಗಳು ತಲುಪಲಿವೆ ಎಂದು ಬಿಇಓ ಪರಶುರಾಮಪ್ಪ ಹೇಳಿದರು.
ಅವರು ಇಲ್ಲಿನ ಗುರುಭವನದಲ್ಲಿ ತಾಲ್ಲೂಕಿನ ವಿವಿಧ ಕ್ಲಸ್ಟರ್ ಗಳ ಶಾಲೆಗಳಿಗೆ ಉಚಿತ ಪಠ್ಯ ಪುಸ್ತಕಗಳನ್ನು ನೀಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ ಸರ್ಕಾರದಿಂದ ಈಗಾಗಲೇ ಶೇ 70% ಉಚಿತ ಪಠ್ಯಪುಸ್ತಕಗಳು ಸರಬರಾಜಾಗಿದ್ದು ಸಮವಸ್ತ್ರಗಳು ಎರಡು ಜೊತೆ ಬಂದಿದ್ದು ಮೇ 31 ರಂದು ಶಾಲೆ ಪ್ರಾರಂಭೋತ್ಸವದಂದು ಮಕ್ಕಳ ಕೈ ಸೇರುವ ರೀತಿಯಲ್ಲಿ ಎಲ್ಲಾ ಶಾಲೆಗಳಿಗೆ ಕಳುಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.
ಈಗಾಗಲೇ ಸಂಬಂಧಿಸಿದಂತೆ ಇಲಾಖೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದ್ದು ಇಲಾಖೆಯ ಅನುಷ್ಠಾನಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದೆ, ಸಂಘ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಹಾಗೂ ತಾಲ್ಲೂಕಿನ ಎಲ್ಲಾ ಮುಖ್ಯ ಶಿಕ್ಷಕರಿಗೆ ಸಭೆಯನ್ನು ಸಹ ನಡೆಸಲಾಗಿದ್ದು ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿ ಶಿಕ್ಷಕರು, ಸಮಿತಿಯವರು ಹಾಗೂ ಪೋಷಕರೊಂದಿಗೆ ಸಮಾಲೋಚಿಸಿ ಶೈಕ್ಷಣಿಕ ಕಾರ್ಯ ಚಟುವಟಿಗೆಗಳನ್ನು ಅತ್ಯಂತ ಅರ್ಥಪೂರ್ಣವಾಗಿ ಆರಂಭಿಸುವಂತೆ ಸೂಚಿಸಿದೆ. ಶೈಕ್ಷಣಿಕ ಸಹಭಾಗಿಗಳು ಶೈಕ್ಷಣಿಕ ಸುಧಾರಣೆಗೆ ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡುವಂತೆ ಮಾಧ್ಯಮಗಳ ಮೂಲಕ ಮನವಿಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಉಮೇಶ್, ವಿ.ಟಿ.ಸ್ವಾಮಿ, ಶೇಖರಪ್ಪ, ಯುವರಾಜ್, ಶಿಕ್ಷಕರ ಸಂಘದ ಅಧ್ಯಕ್ಷರಾದ ಜಗನ್ನಾಥ, ಉಪಾಧ್ಯಕ್ಷರಾದ ಸತ್ಯನಾರಾಯಣ ಸಿರಿವಂತೆ, ಸಿ.ಆರ್.ಪಿಗಳಾದ ದೀಪಾ ಹಾಗೂ ಶೀಲಾ ಮೊದಲಾದವರು.
ವರದಿ: ರಾಘವೇಂದ್ರ ತಾಳಗುಪ್ಪ