ಚುನಾವಣೆಯಲ್ಲಿ ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಿ : ಇ.ಓ ರವಿಕುಮಾರ್
(KOLARA): ಬಂಗಾರಪೇಟೆ: ಎಲ್ಲರನ್ನು ಒಳಗೊಳ್ಳುವ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ವಯಸ್ಕರಿಗೂ ಸಮಾನ ಮತದಾನ ಹಕ್ಕು ಕಲ್ಪಿಸಲಾಗಿದೆ. ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ತಾಲೂಕು ಸ್ವೀಫ್ ಸಮಿತಿ ಅಧ್ಯಕ್ಷ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಮನವಿ ಮಾಡಿದರು.
ತಾಲೂಕಿನ ಬೆಂಗನೂರು ಖಾಸಗಿ ಗಾರ್ಮೆಂಟ್ಸ್ ನಲ್ಲಿ ಶನಿವಾರ ಮಧ್ಯಾಹ್ನ 3:00 ಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಕಡ್ಡಾಯ ಮತದಾನ ಮಾಡುವಂತೆ ಮತದಾರರ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡುತ್ತಾ,ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬ ನಾಗರಿಕ ತನ್ನ ಜವಾಬ್ದಾರಿ ಎಂದು ಅರಿತು ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದರು. ಏಪ್ರಿಲ್ 26 ಕ್ಕೆ ಲೋಕಸಭೆ ಚುನಾವಣೆಗೆ ಮತದಾನ ಜರುಗಲಿದೆ. ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ತಿಳಿಸಿದರು.
ಮತ ಚಲಾಯಿಸುವುದು ಕೇವಲ ನಿಮ್ಮ ಹಕ್ಕು ಮಾತ್ರವಲ್ಲ. ಅದು ದೇಶಕಟ್ಟುವ ನಿಟ್ಟಿನಲ್ಲಿ ಕರ್ತವ್ಯ ಕೂಡ ಆಗಿದೆ. ಈ ಅಭಿಯಾನದಲ್ಲಿ ಎಲ್ಲ ಅರ್ಹ ಮತದಾರರು ಕೈ ಜೋಡಿಸಿ ಶೇ. 100ರಷ್ಟು ಮತದಾನಕ್ಕೆ ಮುಂದಾಗಬೇಕಿದೆ. ಜಗತ್ತಿನಲ್ಲೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪ್ಪಿಕೊಂಡ ಅತಿ ದೊಡ್ಡ ದೇಶ ನಮ್ಮದು. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವ, ಅಭಿವೃದ್ಧಿಗೆ ಪೂರಕವಾಗಿ ಚುನಾವಣೆಗಳು ಅತಿ ಮಹತ್ತರ ಪಾತ್ರ ವಹಿಸುತ್ತವೆ ಎಂದರು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶಂಕರ್, ಚಿತ್ರ, ಹಾಗೂ ಗಾರ್ಮೆಂಟ್ಸ್ ನ ಸಿಬ್ಬಂದಿ ವರ್ಗದವರು ಇದ್ದರು.
ವರದಿ: ವಿಷ್ಣು ಕೋಲಾರ