ಸಂಸ್ಕೃತ ಭಾಷಾ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಶಕುಂತಲಾ ಪಿ ಹಿರೇಮಠ್ ಅವರಿಗೆ ಬೀಳ್ಕೊಡುಗೆ
(SHIVAMOGA): ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜಿನಲ್ಲಿ ಕಳೆದ 24 ವರ್ಷಗಳ ಸುದೀರ್ಘ ಕಾಲ ಸಂಸ್ಕೃತ ಭಾಷಾ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ.ಶಕುಂತಲಾ ಪಿ ಹಿರೇಮಠ್ ರವರಿಗೆ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹರನಾಥ್ ರಾವ್,ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಚ್ ಎಮ್ ಶಿವಕುಮಾರ್, ಜಂಟಿ ಕಾರ್ಯದರ್ಶಿಗಳಾದ ಸತ್ಯನಾರಾಯಣ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ನಂದಾ ಗೋಜನೂರು ಹಾಗೂ ಎಲ್ ಬಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀಶ್, ವಿನಯ್, ವೇದಮೂರ್ತಿ,ಶ್ರೀ ಗೌರಿ, ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಸೂರಜ್ ನಾಯರ್