ಚಿಕ್ಕಮಗಳೂರುನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಗುದ್ದಿದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಗುದ್ದಿದ ಕಾರು

(ಬಾಳೆಹೊನ್ನೂರು): ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನ ಕೆರೆ ಚೌಡೇಶ್ವರಿ ದೇವಸ್ಥಾನ ಬಳಿ ಈ ಘಟನೆ ಸಂಭವಿಸಿದ್ದು, ಟೊಯೋಟಾ ಫಾರ್ಚುನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಗುದ್ದಿರುವ ಘಟನೆ ನಡೆದಿದೆ.
ಬಾಳೆಹೊನ್ನೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟೊಯೋಟಾ ಫಾರ್ಚುನರ್ ಕಾರಿನ ಸ್ಟೇರಿಂಗ್ ಜಾಮ್ ಆಗಿ ಮುಂದಿನ ಚಕ್ರಗಳು ತಿರುಗದೆ ಇದ್ದ ಕಾರಣ ರಸ್ತೆ ಬದಿಯಲ್ಲಿದ್ದ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕರೆಂಟ್ ಕಂಬ ಮುರಿದಿದೆ. ಗೌರಿ ಗಣೇಶ ಹಬ್ಬದ ದಿನವಾದ ಇಂದು ಕಂಬ ಮುರಿದು ಕರೆಂಟ್ ಕಟ್ಟಾಗಿರುವ ಪರಿಣಾಮ ನಗರದ ಜನರಲ್ಲಿ ಕೆಲ ಕಾಲ ಗೊಂದಲ ಸೃಷ್ಟಿಯಾಯಿತು.
ವಾಹನದಲ್ಲಿ ಸಂಚರಿಸುತ್ತಿದ್ದ ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೆಸ್ಕಾಂ ಸಿಬ್ಬಂದಿ ಇಂದು ಪರದಾಡುವ ಪರಿಸ್ಥಿತಿ ಉಂಟಾಯಿತು.

Leave a Reply

Your email address will not be published. Required fields are marked *

Scan the code