ಕೋಲಾರನ್ಯೂಸ್

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬರಪೀಡಿತ ಅಧ್ಯಯನ ಸಭೆ

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬರಪೀಡಿತ ಅಧ್ಯಯನ ಸಭೆ

(KOLARA): ಬಂಗಾರಪೇಟೆ: ತಾಲೂಕಿನ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ. ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ತಿಳಿಸಿದರು

ಇಂದು ಪಟ್ಟಣದ ತಾಲೂಕು ತಾಲೂಕು ಕಚೇರಿಯ ಸಭಾಂಗಣದಲ್ಲಿ ಬರಪೀಡಿತ ಅಧ್ಯಯನದ ಕುರಿತು ಅಧಿಕಾರಿಗಳ ಸಭೆಯನ್ನು ನಡೆಸಲಾಗಿತ್ತು ಈ ಸಭೆಯಲ್ಲಿ ಮಾತನಾಡುತ್ತಾ,ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದೆ.

ಮುಂಗಾರು ವಿಳಂಬ ಹಾಗೂ ಆಗಸ್ಟ್‌ ತಿಂಗಳಲ್ಲಿ ಅತಿ ಕಡಿಮೆ ಮಳೆಯಾಗಿದೆ. ಸೆಪ್ಟೆಂಬರ್‌ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕೊರತೆ, ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code