ಚಿಕ್ಕಮಗಳೂರುನ್ಯೂಸ್

ನಾಳೆ ದುರ್ಗಾದೇವಿ ವಿಗ್ರಹ ಪ್ರತಿಷ್ಠಾಪನೆ.

ನಾಳೆ ದುರ್ಗಾದೇವಿ ವಿಗ್ರಹ ಪ್ರತಿಷ್ಠಾಪನೆ.


(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರು ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ನಾಡಹಬ್ಬ ದಸರಾ ಅಂಗವಾಗಿ ಆಯೋಜಿಸಿರುವ ಹದಿನೈದನೇ ವರ್ಷದ ದುರ್ಗಾದೇವಿ ನವರಾತ್ರಿ ಮಹೋತ್ಸವಕ್ಕೆ ಅ.೩ರಂದು ಮಾರ್ಕಾಂಡೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿದ್ಯುಕ್ತ ಚಾಲನೆ ದೊರೆಯಲಿದೆ.
ಗುರುವಾರ ಬೆಳಿಗ್ಗೆ 8.50ಕ್ಕೆ ಶ್ರೀ ದುರ್ಗಾದೇವಿಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗಣಪತಿ ಹೋಮ ನಡೆಯಲಿದ್ದು, ನವರಾತ್ರಿಯ ಧಾರ್ಮಿಕ ಕಾರ್ಯಕಮ್ರಗಳಿಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಟ್ರಸ್ಟಿ ಜಿ.ರಾಜಗೋಪಾಲ ಜೋಷಿ ಚಾಲನೆ ನೀಡಲಿದ್ದಾರೆ.


ಬೆಳಿಗ್ಗೆ 11 ಗಂಟೆಗೆ ದುರ್ಗಾದೇವಿ ಸನ್ನಿಧಿಯಲ್ಲಿ ಹಂಸವಾಹಿನಿ ಬ್ರಾಹ್ಮೀ ಪೂಜಾ, ಸಪ್ತಶತೀ ಪಾರಾಯಣ, ಮಂಗಳಾರತಿ ನೆರವೇರಲಿದೆ.
ಸಂಜೆ 7.45ಕ್ಕೆ ಭಕ್ತಾಧಿಗಳಿಂದ ಪೂಜಾ ಸೇವೆ, ಮಂಗಳರಾತಿ ನಡೆಯಲಿದ್ದು, ರಾತ್ರಿ 8 ಗಂಟೆಯಿಂದ ಸ್ಥಳೀಯ ಕಲಾವಿದರು ಹಾಗೂ ವಿದ್ಯಾರ್ಥಿಗಳಿಂದ ವೈವಿದ್ಯಮಯ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ.

Leave a Reply

Your email address will not be published. Required fields are marked *

Scan the code