ಕೋಲಾರನ್ಯೂಸ್

ಇನ್ನು ಮುಂದೆ ಶಾಲಾ ಮಕ್ಕಳಿಗೆ ವಾರದ 6 ದಿನಗಳು ಮೊಟ್ಟೆ ವಿತರಣೆ.

ಇನ್ನು ಮುಂದೆ ಶಾಲಾ ಮಕ್ಕಳಿಗೆ ವಾರದ 6 ದಿನಗಳು ಮೊಟ್ಟೆ ವಿತರಣೆ.


(KOLARA): ಬಂಗಾರಪೇಟೆ :ಇದುವರೆಗೆ ಶಾಲೆಯಲ್ಲಿ ವಾರಕ್ಕೆರಡು ದಿನ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು ಆದರೆ ಪ್ರಗತಿಪರ ಕೈಗಾರಿಕೆ ಉದ್ಯಮಿ ಅಂಜಿಮ್ ಪ್ರೇಮ್ ಜಿ ಅವರು ಸಿ ಆರ್ ಎಸ್ ಫೌಂಡೇಶನ್ ವತಿಯಿಂದ 1591 ಕೋಟಿ ರೂ ನೀಡಿದ್ದು ಒಂದರಿಂದ 10ನೇ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನಗಳು ಮೊಟ್ಟೆ ನೀಡುತ್ತಿದ್ದೇವೆ ನಮ್ಮ ಸಿದ್ದರಾಮಯ್ಯ ಸರ್ಕಾರ ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು.

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ನಡೆದ ರಾಜ್ಯ ಸರ್ಕಾರದ ಅಕ್ಷರ ದಾಸೋಹ  ಮಧ್ಯಾಹ್ನ ಉಪಹಾರ ಯೋಜನೆಯಡಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು 2024 – 25 ನೇ ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ  ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಕ್ಕಳಿಗೆ ಪೌಷ್ಟಿಕ ಆಹಾರವಾದ ಮೊಟ್ಟೆ, ಬಾಳೆ ಹಣ್ಣು, ಚಿಕ್ಕಿ ಮಿಠಾಯಿಯನ್ನು ವಿತರಣೆ ಮಾಡಿ ಮಾತನಾಡುತ್ತಾ, ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಚಾರಿತ್ರಿಕ ಪುಣ್ಯ ಕಾರ್ಯಕ್ಕೆ ಅಜೀಂ ಪ್ರೇಮ್‌ಜಿ ನೆರವಾಗುತ್ತಿರುವುದು ಇತರೆ ಎಲ್ಲ ಉದ್ಯಮಿಗಳಿಗೂ ಮಾದರಿ. ಬಡವರೇ ಅಧಿಕ ಸಂಖ್ಯೆಯಲ್ಲಿರುವ ಸರ್ಕಾರಿ ಶಾಲೆಗಳ ಮಕ್ಕಳು
ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಕಾರಣಕ್ಕೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡುವ ಕಾರ್ಯಕ್ರಮ ಆರಂಭಿಸಲಾಗಿತ್ತು.ವಾರಕ್ಕೆ ಒಂದು ದಿನ ಇದ್ದ ಮೊಟ್ಟೆಯನ್ನು ಎರಡು ದಿನಕ್ಕೆ ವಿಸ್ತರಿಸಲಾಗಿತ್ತು. ಈಗ ಒಂದರಿಂದ ಹತ್ತನೇ ತರಗತಿಯವರೆಗೆ ಎಲ್ಲ ಸರ್ಕಾರಿ, ಅನುದಾನಿತ ಶಾಲೆಯ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ನೀಡಲಾಗುವುದು ಎಂದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣ, ಆರೋಗ್ಯ ದೊರಕಿಸಲು ರಾಜ್ಯ ಸರ್ಕಾರ ಅವಕಾಶಗಳನ್ನು ಸೃಷ್ಟಿಸುತ್ತಿದೆ. ಹಿಂದೆ ಅಧಿಕಾರದಲ್ಲಿ ಇದ್ದಾಗ ಕ್ಷೀರಭಾಗ್ಯ ಯೋಜನೆ ಮೂಲಕ ಬೆಳಿಗ್ಗೆ ಮಕ್ಕಳಿಗೆ ಹಾಲು ನೀಡಲು ಆರಂಭಿಸಿದ್ದೆವು. ಈಗ ಹಾಲಿನ ಜೊತೆ ರಾಗಿ ಮಾಲ್ಟ್‌ ಸಹ ನೀಡಲಾಗುತ್ತಿದೆ ಎಂದು ಹೇಳಿದರು.

ವಿಶೇಷವಾಗಿ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಮಾಡಿಕೊಡುತ್ತಿದ್ದೇವೆ ಚೆನ್ನಾಗಿ ಓದಿ ಐಎಎಸ್, ಕೆ ಎ ಎಸ್, ಐಪಿಎಸ್, ಜಡ್ಜ್ ಅಧಿಕಾರಿಗಳು ಆಗಬೇಕು ಎಂದು ಹಾರೈಸಿದರು. ಎಲ್ಲಾ ಶಾಲೆಗಳನ್ನು ಉನ್ನತಿಕರಿಸಲಾಗುತ್ತಿದೆ. ಶಾಲೆಯಲ್ಲಿ ಇನ್ನೂ ನಾಲ್ಕು ಕಟ್ಟಡಗಳನ್ನು ನಿರ್ಮಿಸಲಾಗುವುದು, ಇನ್ನೂ ಕಟ್ಟಲು ಜಾಗ ಸಾಲದು ಪುರಸಭೆ ಅಧ್ಯಕ್ಷರಾದ ಸದಸ್ಯರು ದಯಮಾಡಿ 100 ಅಡಿ  ಜಾಗವನ್ನು ದೊಡ್ಡ ಮನಸ್ಸು ಮಾಡಿ ನೀಡಬೇಕೆಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯನ್ನು ಸಹ ನಿರ್ಮಿಸುತ್ತೇವೆ ಮೂರು ಕೋಟಿ ಹಣವನ್ನು ಬಿಡುಗಡೆ ಮಾಡಲು ಪ್ರಯತ್ನ ಮಾಡುತ್ತಿದ್ದೇನೆ. ಇದರೊಟ್ಟಿಗೆ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡವನ್ನು ಪ್ರಾರಂಭಿಸಲಾಗುವುದು ಹಾಗೂ ಎನ್ ಟಿಜಿಎಂ ಶಾಲೆಯ ಹಳೆ  ಕಟ್ಟಡವನ್ನು ಕೆಡವಿ ನೂತನ ಕಟ್ಟಡ ಕಟ್ಟಲು ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಗೋವಿಂದ  ಸದಸ್ಯರಾದ  ವೆಂಕಟೇಶ್, ಶಪಿ,ಅರುಣಾಚಲಂಮಣಿ, ಸುಹೇಲ್, ಪೋನ್ನಿ, ಪ್ರಶಾಂತ್, ತಹಶೀಲ್ದಾರ್ ವೆಂಕಟೇಶ್ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಮೂರ್ತಿ,  ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಅಪ್ಪಯ್ಯ ಗೌಡ, ಎಇಇ ರವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ,ಸಮನ್ವಯಾಧಿಕಾರಿ ಶಶಿಕಲಾ, ಎಸ್ಸಿಎಸ್‌ಟಿ ಸಮನ್ವಯ ಸಮಿತಿ ಅಧ್ಯಕ್ಷ ನಾಗರಾಜ್, ಎಸ್ ಎಸ್ ಟಿ ನೌಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ   ಪ್ರಾಂಶುಪಾಲರದ ಸುಬ್ರಮಣಿ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಪ್ಪ, ಇನ್ಸ್ಪೆಕ್ಟರ್ ರಾಜಣ್ಣ ಮೊದಲಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code