ತಾಲೂಕಿನ ಬೆಂಗನೂರು ಬಳಿ ದ್ವಿಚಕ್ರ ವಾಹನಕ್ಕೆ ಈಚರ್ ವಾಹನ ಡಿಕ್ಕಿ, ಸ್ಥಳದಲ್ಲೇ ಇಬ್ಬರು ಯುವಕರು ಸಾವು
(KOLARA): ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ದ್ವಿಚಕ್ರವಾಹನಕ್ಕೆ ಈಚರ್ ವಾಹನ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ 10:30 ರಲ್ಲಿ ನಡೆದಿದೆ.
ಮೃತ ದುರ್ದೈವಿ ಮುತ್ತು 26 ವರ್ಷ ಮೂಲತಹ ಪಟ್ಟಣದ ಸಿದ್ದಾರ್ಥ ನಗರದವರೆಂದು ತಿಳಿದು ಬಂದಿದೆ. ಮತ್ತೊಬ್ಬ ರವಿ 30 ವರ್ಷ ಮೂಲತಹ ಮಂಡ್ಯ ಕಡೆಯವರೆಂದು ತಿಳಿದು ಬಂದಿದೆ.ಇಬ್ಬರು ಯುವಕರು ತಾಲೂಕಿನ ಬೆಂಗನೂರು ಬಳಿ ಇರುವ ಖಾಸಗಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮುಗಿಸಿ ವಾಪಸ್ ಆಗುವ ಸಂದರ್ಭದಲ್ಲಿ ಈ ಒಂದು ದುರ್ಘಟನೆ ನಡೆದಿದೆ.
ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ