ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಸ್ವಾಲಂಬಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ.
(KOLARA): ಬಂಗಾರಪೇಟೆ :ದೇಶಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಸ್ವಾಲಂಬಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರ ಎಲ್ಲರಲ್ಲಿಯೂ ಇದೆ ನೋಂದ ಕುಟುಂಬಕ್ಕೆ ಆರ್ಥಿಕ ಶಕ್ತಿ ನೀಡಬೇಕೆಂಬ ಉದ್ದೇಶದಿಂದ ಈ ಒಂದು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ರಾಜ್ಯ ನಿರ್ದೇಶಕ ಡಾ. ಮೋಹನ ರಾವ್ ತಿಳಿಸಿದರು.
ಪಟ್ಟಣದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿ ಯೋಜನೆಗಳ ಒಂದು ದಿನದ ಉಚಿತ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಸ್ವಾವಲಂಬಿ ಜೀವನ ನಡೆಸಲು ಇನ್ನೂ ಸರಿಯಾದ ಅನುಕೂಲವಾಗಿಲ್ಲ. ಆದರೆ ಅದು ಸಾಧ್ಯವಾಗಿಸುವ ಕಾರ್ಯವಾಗಬೇಕು. ಆಸಕ್ತ ವಿಷಯದ ಮೂಲಕ ಕಲೆ ನಡೆದರೆ ಆರ್ಥಿಕ ಭದ್ರತೆ ಸಾಧ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳನ್ನು ನೀಡುತ್ತಿದ್ದು, ಮಹಿಳೆಯರು ಅದರ ಅದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರಿಯಾದ ಮಾರ್ಗದರ್ಶನ ಅವಕಾಶ ಅವಶ್ಯ. ಶಿಕ್ಷಣಕ್ಕಾಗಿ ಎಲ್ಲರೂ ಶಿಕ್ಷಣ ಪಡೆಯಬೇಕು ಉತ್ತಮ ಸಂಸ್ಕಾರವಿದ್ದಾಗ ಮಾತ್ರ ಬೆಳವಣಿಗೆ ಸಾಧ್ಯ.ಉತ್ತಮ ವ್ಯಕ್ತಿತ್ವ ಅವಶ್ಯ. ಇದು ಇದ್ದಾಗ ಎಲ್ಲವೂ ಉತ್ತಮವಾಗಲು ಸಾಧ್ಯ ಎಂದರು.
ರಾಷ್ಟ್ರೀಯ ಪ್ರಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಶಾಖಾ ಮುಖ್ಯಸ್ಥರದ ಕೋಕಿಲ ರವರು ಮಾತನಾಡಿ,ಕೈಗಾರಿಕೆಯು ಆರ್ಥಿಕತೆಯ 2 ನೆಯ ಭಾಗವಾಗಿ ಕಾರ್ಯನಿರ್ವಹಿಸುತ್ತದೆ. ಬಟ್ಟೆ ಡಿಸೈನಿಂಗ್ ಗೆ ಆಧುನಿಕತೆ ಸ್ಪರ್ಶ ನೀಡಿದಾಗ, ಹೆಚ್ಚು ಬೇಡಿಕೆ ಸಿಗುತ್ತದೆ. ಮಹಿಳೆಯರು ಕಾರ್ಯಾಗಾರಗಳನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕ ಸ್ವಾವಲಂಬಿಯಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಸಹಾಯಕ ನಿರ್ದೇಶಕ ಲಿಂಗದೊರೈ, ರಾಮ್ ಪ್ರಸಾದ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿಯ ರಾಜ್ಯಾಧ್ಯಕ್ಷರಾದ ಡಾ. ನೇತ್ರಾವತಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಮಂಡಳಿಯ ಜಿಲ್ಲಾಧ್ಯಕ್ಷರಾದ ಶಿವಕುಮಾರ್, ಪಿಡಿಓ ಸರಸ್ವತಿ, ವಾಣಿ ಮೊದಲಾದವರು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ