ಪ್ರಜಾಪ್ರಭುತ್ವದ ಹಕ್ಕಿನಲ್ಲಿ ಪ್ರತಿಯೊಬ್ಬರು ಮತದಾನ ಮಾಡಬೇಕು : ಡಿ.ಸಿ.ಅಕ್ರಂಪಾಷಾ
(KOLARA): ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ವಿಧಾನಸಭಾ ಕ್ಷೇತ್ರದಲ್ಲಿ ಈ ಹಿಂದೆ ಅತ್ಯಂತ ಕಡಿಮೆ ಮತದಾನ ಮಾಡಿರುವಂತ ವಾರ್ಡ್ಗಳನ್ನ ಗುರುತಿಸಿ ಆ ಪ್ರದೇಶದಲ್ಲಿ ಅತಿ ಹೆಚ್ಚು ಮತದಾನ ಮಾಡಿಸಲು ಪಂಜಿನ ಮೆರವಣಿಗೆ ಮಾಡುವ ಮೂಲಕ ಈ ಮತದಾನ ಜಾಗೃತಿ ಕಾರ್ಯಕ್ರಮವನ್ನು ಮೊದಲಿಗೆ ಬಂಗಾರಪೇಟೆಯಿಂದ ಪ್ರಾರಂಭ ಮಾಡುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷಾ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯ್ತಿ ಮುಂಭಾಗದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ಕೋಲಾರ,ತಾಲ್ಲೂಕು ಆಡಳಿತ,ತಾಲ್ಲೂಕು ಪಂಚಾಯ್ತಿ ಹಾಗೂ ಪುರಸಭೆ ವತಿಯಿಂದ ಕೋಲಾರ ಜಿಲ್ಲೆಯ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ,ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಈ ಮತದಾನ ಜಾಗೃತಿ ಕಾರ್ಯಕ್ರಮವನ್ನ ವಿಭಿನ್ನ ರೀತಿಯ ಮಾಡುತ್ತೇವೆ.ಜಿಲ್ಲೆಯ ಎಲ್ಲಾ ಮತದಾರರು ಸಹ ಪ್ರಜಾಪ್ರಭುತ್ವದ ಹಕ್ಕಿನಲ್ಲಿ ಮತದಾನ ಮಾಡುವ ಮೂಲಕ ಮತ ಚಲಾಯಿಸಬೇಕು ಎಂಬ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ತಾಲೂಕು ಪಂಚಾಯಿತಿ ಇಓ ರವಿಕುಮಾರ್ ನೇತೃತ್ವದಲ್ಲಿ ಈ ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಪಿ.ಡಿ.ಓಗಳು, ಪುರಸಭೆಯ ನೌಕರರು,ವಾಟರ್ ಮ್ಯಾನ್ಗಳು ಹಾಗೂ 21 ಪಂಚಾಯ್ತಿಗಳ ಸಿಬ್ಬಂದಿ ವರ್ಗ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪಟ್ಟಣದ ವಿವಿಧ ವಾರ್ಡ್ಗಳ ಪ್ರಮುಖ ಬೀದಿಗಳಲ್ಲಿ ಮತದಾನ ಜಾಗೃತಿಯ ಜಾಥ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು,ತಹಸಿಲ್ದಾರ್ ರಶ್ಮಿ, ಪುರಸಭೆ ಮುಖ್ಯ ಅಧಿಕಾರಿ ಮಿನಾಕ್ಷಿ,ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ