ಜಿಲ್ಲೆನ್ಯೂಸ್

ದೃಢ ಭಾರತ ಸಂಕಲ್ಪಕ್ಕೆ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಸಂಸದ ಎಸ್ ಮುನಿಸ್ವಾಮಿ

ದೃಢ ಭಾರತ ಸಂಕಲ್ಪಕ್ಕೆ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಸಂಸದ ಎಸ್ ಮುನಿಸ್ವಾಮಿ

(KOLARA): ಬಂಗಾರಪೇಟೆ: ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ ಹಾಗೂ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಹೆಮ್ಮೆಯ ಪ್ರಧಾನಿ ಮೋದಿ ಅವರು ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನವನ್ನು ಆರಂಭಿಸಿದ್ದಾರೆ ಎಂದು ಸಂಸದ ಎಸ್ ಮುನಿಸ್ವಾಮಿ ಅಭಿಪ್ರಾಯ ಪಟ್ಟರು.

ಪಟ್ಟಣದ ಶ್ರೀ‌ ಕೋದಂಡರಾಮಸ್ವಾಮಿ ದೇವಸ್ಥಾನದ ಆವರಣದಲ್ಲಿ ಲೀಡ್ ಬ್ಯಾಂಕ್ ಮತ್ತು ಪಂಜಾಬ್ ಬ್ಯಾಂಕ್ ಸಹಯೋಗದಲ್ಲಿ‌ ಹಮ್ಮಿಕೊಂಡಿದ್ದ “ವಿಕಸಿತ‌ ಭಾರತ ಸಂಕಲ್ಪ ಯಾತ್ರೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರದ ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಪ್ರಧಾನಮಂತ್ರಿ ಸುರಕ್ಷ ಭೀಮ ಯೋಜನೆ, ಜೀವನಜ್ಯೋತಿ ಭೀಮಾ ಯೋಜನೆ, ಸುಕನ್ಯ‌ ಸಮೃದ್ಧಿ, ಅಟಲ್ ಪಿಂಚಣಿ, ಜೀವನ ಜ್ಯೋತಿ ವಿಮಾ, ಉಜ್ವಲ ಸೇರಿದಂತೆ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲಾ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶದ ವಾರ್ಡ್‌ಗಳನ್ನು ಒಳಗೊಂಡಂತೆ ದೆಶವ್ಯಾಪಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಿ, ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮವಾಗಿದ್ದು ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆಬಾಗಿಲಿಗೆ ತಲುಪಿಸುವ ಗುರಿಯಾಗಿದೆ ಎಂದರು.
ಜಾತಿ, ಮತ, ಧರ್ಮ, ಪಕ್ಷ, ಬೇಧ ಮರೆತು ದೇಶದ 140 ಕೋಟಿ ಜನರ ಆಶಯಕ್ಕೆ ಬದ್ಧರಾಗಿ ಸಮಗ್ರ ಅಭಿವೃದ್ಧಿಗೆ ತಾರತಮ್ಯ ನಿರಪೇಕ್ಷಿತ ಆಡಳಿತಕ್ಕೆ ಮುನ್ನುಡಿ ಬರೆದು ಯೋಜನೆಗಳನ್ನು ಅನುಷ್ಠಾನಗೊಳಿಸಿ ದೇಶದ ಜನತೆಗೆ ಅರಿವು ಮೂಡಿಸುವ ಉದ್ದೇಶವೇ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಎಂದರು.



ಮೋದಿ ಒಬ್ಬ ವ್ಯಕ್ತಿಯಲ್ಲ ಕೋಟ್ಯಾಂತರ ಭಾರತೀಯರ ಭರವಸೆ
ಮೋದಿ ರವರು ರೈಲ್ವೆ ನಿಲ್ದಾಣದಲ್ಲಿ ಚಹಾ ಮಾಡುತ್ತಿದ್ದರು ವಾಸ್ತವಿಕವಾಗಿ ಬಡತನ ಮತ್ತು ಹಸಿವಿನ ಅನುಭವವನ್ನು ಹೊಂದಿದ್ದು ದೇಶದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಅವರು ಭರವಸೆಗಳನ್ನು ಈಡೇರಿಸಲು ಮೋದಿ ಒಬ್ಬ ಶಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ,ಹುಸಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬರುವುದು ಬಿಜೆಪಿಯ ಜಾಯಮಾನವಲ್ಲ ನೀಡಿದ ಭರವಸೆಗಳಿಗೆ ಪೂರಕವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಾ ಬರುತ್ತಿದೆ.

ಸ್ವಾವಲಂಬಿ ಬದುಕಿಗೆ ಆಸರೆಯಾದ ಮೋದಿ:
ಸರಿಸುಮಾರು 70 ವರ್ಷಗಳ ಕಾಲ ದೇಶವನ್ನು ಆಳ್ವಿಕೆ ಮಾಡಿದ ಸರ್ಕಾರಗಳು ಹುಸಿ ಆಶ್ವಾಸನೆಗಳನ್ನು ನೀಡಿ ಜನರಿಗೆ ಮಂಕುಬೂದಿ ಎರಚಿದರು ದೇಶದಲ್ಲಿ ಬಡತನ ನಿರುದ್ಯೋಗ ಸಮಸ್ಯೆಗಳು ತಾಂಡವಾಡುತ್ತಿದ್ದ ಸಂದರ್ಭದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೋದಿ ರವರು ದೇಶದ ಸ್ವಾವಲಂಬಿ ಬದುಕಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಗ್ರಾಮಗಳ ಸರ್ವತೋನ್ಮುಖ ಅಭಿವೃದ್ಧಿಗೆ 15 ಮತ್ತು 16ನೇ ಹಣಕಾಸು ಯೋಜನೆಯಲ್ಲಿ ಅರವತ್ತು ಲಕ್ಷ ರೂಪಾಯಿ ಅನುದಾನವನ್ನು ನೀಡಲಾಗುತ್ತಿದೆ,
ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲೇ ಮೂರು ಲಕ್ಷಕ್ಕೂ ಹೆಚ್ಚು ಶೌಚಾಲಯಗಳನ್ನು ಕೋಲಾರ ಜಿಲ್ಲೆಗೆ ಒದಗಿಸಲಾಗಿದೆ, ಹಾಗೂ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ 176 ಕಿಲೋಮೀಟರ್ ಡಾಂಬರೀಕರಣ‌ ಮತ್ತು ಗ್ರಾಮ ಸಡಖ್ ಯೋಜನೆಯ ಅಡಿಯಲ್ಲಿ ನಿರ್ಮಾಣ ಮಾಡಲಾಗಿದ, 60 ಕೋಟಿ ವೆಚ್ಚದಲ್ಲಿ ಕೋಲಾರ ಜಿಲ್ಲೆಯಲ್ಲಿ ರಸ್ತೆಗಳು ಅಭಿವೃದ್ಧಿ ಪಥದಲ್ಲಿ ಸಾಗಿದೆ, ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ 32 ಸಾವಿರದ ಕೋಟಿ ಹಣವನ್ನು ಕೋಲಾರ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ, ಅಮೃತ ಸರೋವರ ಯೋಜನೆಯ ಅಡಿಯಲ್ಲಿ 2 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿಯನ್ನು ಪಡಿಸಲಾಗಿದೆ, ಪ್ರಧಾನ ಮಂತ್ರಿ ಸ್ವಾ ನಿಧಿ ಯೋಜನೆಯ ಮೂಲಕ ಸ್ವಾವಲಂಬಿ ಬದುಕಿಗೆ ಆಸರೆಯಾಗಿದೆ, ವಿಶ್ವಕರ್ಮ ಯೋಜನೆಗೆ13000 ಕೋಟಿ ವೆಚ್ಚದಲ್ಲಿ ಬಿಡುಗಡೆ ಮಾಡಿ ಸಣ್ಣ ವ್ಯಾಪಾರಿಗಳಿಗೆ ಸಹಾಯ ಹಸ್ತ ಚಾಚಲಾಗುತ್ತಿದೆ, ಆ ಮೂಲಕ ದೇಶವನ್ನು ಆರ್ಥಿಕ ಸಾಮಾಜಿಕ ಆದ್ಯೋಗಿಕ ತಂತ್ರಜ್ಞಾನ ವಿಜ್ಞಾನ ಕ್ಷೇತ್ರಗಳಲ್ಲಿ ಅಭಿವೃದ್ಧಿ ಫಥದತ್ತ ಮುನ್ನಡೆಸುವುದರ ಮೂಲಕ ಸಮೃದ್ಧ ಭಾರತ ಎಂದು ಪ್ರತಿಬಿಂಬಿಸುತ್ತಿದೆ ಎಂದರು



2ಲಕ್ಷ ಕೋಟಿ ಸಾಲ ತೀರಿಸಿದ ಮೋದಿ
ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯ ಮೂಲಕ 10 ಕೆಜಿ ಅಕ್ಕಿ ನೀಡುವುದಾಗಿ ಅಧಿಕಾಕ್ಕೆ ಬಂದು ಸರ್ಕಾರ ಇದುವರೆಗೂ ಜನರಿಗೆ ಅಕ್ಕಿ ನೀಡಲಿಲ್ಲ ಕೇಂದ್ರ ಸರ್ಕಾರ ಕೊಟ್ಟ 5 ಕೆಜಿ ಅಕ್ಕಿಯನ್ನು ತಮ್ಮ ಸಾಧನೆ ಎಂದು ಬೊಬ್ಬೆ ಹಾಕುತ್ತಿದ್ದಾರೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ತೈಲ ಬಾಂಡ್ ಮೂಲಕ 2ಲಕ್ಷ ಕೋಟಿ ಸಾಲ ಮಾಡಿದ್ದರು ಅಡುಗೆ ಅನಿಲ ಬೆಲೆ ಗಗನಕ್ಕೇರಿಸಿದರು ಮೋದಿ ಅಧಿಕಾರಿ ವಹಿಸಿಕೊಂಡ ನಂತರ ಸಾಲ ತೀರಿಸಿ ಇಂದು ವಿಶ್ವದ 4ನೇ ಆರ್ಥಿಕ ರಾಷ್ಟ್ರ ವಾಗಿ ಬೆಳೆದಿದೆ.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ವಿ. ಮಹೇಶ್, ವಿಸ್ತಾರಕ ರವಿಕುಮಾರ್, ತಾಲೂಕು ಅಧ್ಯಕ್ಷ ನಾಗೇಶ್,‌ ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಮಾರ್ಕಂಡೇ ಗೌಡ, ಪುರಸಭೆ ಸದಸ್ಯ ಕಪಾಲಿ ಶಂಕರ್, ಜಿಲ್ಲಾ ಉಪಾಧ್ಯಕ್ಷ ಹೊಸರಾಯಪ್ಪ, ಎ, ಸಿ ಮೋರ್ಚಾ ಜಿಲ್ಲಾಧ್ಯಕ್ಷ ಅಮರೇಶ್, ಗ್ರಾ. ಪಂ. ಸದಸ್ಯ ಶ್ರೀನಿವಾಸ್, ಸವಿತಾ ಬಾಬು, ಗೋವಿಂದ, ಮುಖಂಡರಾದ ಹನುಮಪ್ಪ, ಶ್ರೀನಿವಾಸ್, ಪಂಜಾಬ್ ಬ್ಯಾಂಕ್ ವ್ಯವಸ್ಥಾಪಕ ಶ್ಯಾಮಲಾ, ನರಸಿಂಹಪ್ಪ. ಇತರರು ಉಪಸ್ಥಿತರಿದ್ದರು,

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code