ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತೀರ್ಣ- ಬಾಲಕಿ ನೇಣಿಗೆ ಶರಣು
(KOLARA): ಬಂಗಾರಪೇಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತೀರ್ಣರಾದರೆಂದು ಬೇಸತ್ತ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಪಟ್ಟಣದಲ್ಲಿ ನಡೆದಿದೆ.
ಗುರುವಾರದಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಟ್ಟಣದ ವಿಜಯನಗರದ ನಿವಾಸಿಯಾದ ಕಾವ್ಯ (16) ಪರೀಕ್ಷೆಯಲ್ಲಿ ಅನುತೀರ್ಣರಾಗಿದ್ದು, ಇದರಿಂದ ಬೇಸತ್ತು ಮನನೊಂದು ಮನೆಯಲ್ಲಿಯೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮಗಳು ಎದ್ದು ಬರಲಿಲ್ಲವೆಂದು ನೋಡಲಾಗಿ ಅನುಮಾನ ಬಂದು ಬಾಗಿಲು ಹೊಡೆದು ನೋಡಲಾಗಿ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ, ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಿಗೆ ತೋರಿಸಲಾಗಿ ವೈದ್ಯರು ವಿದ್ಯಾರ್ಥಿನಿ ಮೃತಪಟ್ಟಿರುವುದನ್ನು ದೃಢಪಡಿಸಿರುತ್ತಾರೆ. ತಂದೆ ತಾಯಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು, ಪಟ್ಟಣದ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ವಿಷ್ಣು ಕೋಲಾರ