ರೈತ ಸಂಘದಿಂದ ನಷ್ಟ ಬೆಳೆ ಸಮೇತ ರೈಲ್ವೆ ಇಲಾಖೆ ಮುಂದೆ ಹೋರಾಟ, ರೈಲ್ವೆ ಅಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ
(KOLARA): ಬಂಗಾರಪೇಟೆ: ಹಿಂಗಾರುಮಳೆ ಆರ್ಭಟದಿಂದ ತತ್ತರಿಸಿರುವ ರಾಜ್ಯದ ರೈತ, ಕೂಲಿಕಾರ್ಮಿಕರ ರಕ್ಷಣೆಗೆ 10 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿ ನರೇಗಾದಲ್ಲಿ ದುಡಿಯುವ ಕೈಗೆ 365 ದಿನ ಕೆಲಸ ನೀಡಿ, ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕೆಂದು ರೈತ ಸಂಘದಿಂದ ನಷ್ಟ ಬೆಳೆ ಸಮೇತ ರೈಲ್ವೆ ಇಲಾಖೆ ಮುಂದೆ ಹೋರಾಟ ಮಾಡಿ ರೈಲ್ವೆ ಅಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರಿಗೆ ಮನವಿ ನೀಡಿ ಒತ್ತಾಯ ಮಾಡಿದರು.
ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ,ಮುಂಗಾರು ಮಳೆ ಹಿನ್ನಡೆಯಾಗಿ ಹಿಂಗಾರು ಮಳೆ ಆರ್ಭಟಕ್ಕೆ ರಾಜ್ಯದ ಜನಸಾಮಾನ್ಯರ ಬದುಕು ನೀರುಪಾಲು ಆಗುವ ಜೊತೆಗೆ ರೈತ ಕೂಲಿಕಾರ್ಮಿಕರ ಜೀವನ ಅಸ್ತವ್ಯಸ್ತವಾಗುತ್ತಿದೆ. ನಿಲ್ಲದ ಮಳೆರಾಯನ ಕೋಪಕ್ಕೆ ದುಡಿಯುವ ಕೈಗೆ ಕೆಲಸವಿಲ್ಲದೆ ರೈತರು ಬೆಳೆದ ಬೆಳೆಗಳಿಗೆ ರೋಗ ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ಕೈಗೆ ಬಾರದೆ ಖಾಸಗಿ ಸಾಲಕ್ಕೆ ಸಿಲುಕಿ ನಷ್ಟದಲ್ಲಿರುವ ರೈತರ ರಕ್ಷಣೆಗೆ ನಿಲ್ಲಬೇಕಾದ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿಫಲವಾಗಿದ್ದಾರೆಂದು ಅವ್ಯವಸ್ಥೆ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.
ರಾಜ್ಯಾದ್ಯಂತ ಮಳೆಯಿಂದ ನಷ್ಟವಾಗಿರುವ ರೈತರ ರಕ್ಷಣೆಗೆ ಅಧಿಕಾರಿಗಳು ಸ್ಪಂಧಿಸದ ಜೊತೆಗೆ ಯಾವುದೇ ರೈತರ ತೋಟಕ್ಕೆ ಹೋಗಿ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಾದ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಗ್ಯಾರೆಂಟಿಗಳ ಆದಾರದ ಮೇಲೆ ಅಧಿಕಾರಕ್ಕೆ ಬಂದಿರುವ ಸರ್ಕಾರ ಅನುದಾನಗಳನ್ನು ಬಿಡುಗಡೆ ಮಾಡದೆ ಜಿಲ್ಲೆಗಳನ್ನು ನಿರ್ಲಕ್ಷೆ ಮಾಡಿ ರೈತ ವಿರೋಧಿ ದೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿದರು.
ಅಂಡರ್ಪಾಸ್ಗಳಲ್ಲಿ ನೀರು ಸರಾಗವಾಗಿ ಹರಿಯಲಾಗದೆ ತುಂಬಿತುಳುಕುತ್ತಿರುವುದರಿಂದ ರೈತರ ತರಕಾರಿ ಮಕ್ಕಳು ಶಾಲೆಗೆ ತೆರಳಲು ಸಮಸ್ಯೆಯಾಗುತ್ತಿರುವ ಜೊತೆಗೆ ಹಿಂಗಾರು ಮಳೆ ಆರ್ಭಟಕ್ಕೆ ತತ್ತರಿಸಿರುವ ರಾಜ್ಯದ ರೈತರ ರಕ್ಷಣೆಗೆ ಕೇಂದ್ರ ಸರ್ಕಾರದಿಂದ 10 ಸಾವಿರ ಕೋಟಿ ಪರಿಹಾರ ಹಣ ಬಿಡುಗಡೆ ಮಾಡಬೇಕು. ಬರ ಹಾಗೂ ಬೆಳೆ ನಷ್ಟದಿಂದ ತತ್ತರಿಸಿರುವ ರೈತ, ಕೂಲಿ, ಕಾರ್ಮಿಕರ ರಕ್ಷಣೆಗೆ 365 ದಿನ ನರೇಗಾದಲ್ಲಿ ಕೂಲಿ ಕೆಲಸ ನೀಡಿ ಪ್ರತಿ ಕಾರ್ಮಿಕರಿಗೆ ಸಾವಿರ ರೂಪಾಯಿ ಪ್ರತಿದಿನಕ್ಕೆ ಕೂಲಿ ಹಣವನ್ನು ನೀಡುವ ಜೊತೆಗೆ ಉಚಿತವಾಗಿ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಬೇಕೆಂದು ಮನವಿ ಮೂಲಕ ಮಾನ್ಯ ಪ್ರಧಾನ ಮಂತ್ರಿಗಳನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ತಾ.ಅಧ್ಯಕ್ಷ ಕದರಿನತ್ತ ಅಪ್ಪೋಜಿರಾವ್, ಮುನಿಕೃಷ್ಣ, ವಿಶ್ವ, ಮುನಿಯಪ್ಪ, ಕೃಷ್ಣಪ್ಪ, ಮಂಗಸಂದ್ರ ತಿಮ್ಮಣ್ಣ, ಶಿವಾರೆಡ್ಡಿ, ಗಿರೀಶ್, ರತ್ನಮ್ಮ, ಶೈಲಜ, ರಾಧಮ್ಮ, ಚೌಡಮ್ಮ, ಮುನಿರತ್ನಮ್ಮ, ನಾಗರತ್ನಮ್ಮ, ಪದ್ಮಾವತಿ, ಚಾಂದ್ಪಾಷ, ಅಹಮದ್, ಮುಂತಾದವರು ಇದ್ದರು.
ವರದಿ: ವಿಷ್ಣು ಕೋಲಾರ