ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಯಲ್ಲಿ ಬೈರತಿ ಬಾಯ್ಸ್ ರವರಿಗೆ ಪ್ರಪ್ರಥಮ ಬಹುಮಾನ.
(KOLARA): ಕೋಲಾರ : ನರಸಾಪುರ ಗ್ರಾಮದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅನೇಕ ತಂಡಗಳು ಭಾಗವಹಿಸಿ ಟೂರ್ನಿಯನ್ನು ಯಶಸ್ವಿಗೊಳಿಸಿದರು.
ಅಖಿಲ ಭಾರತ ಡಾ ಬಿ ಆರ್ ಅಂಬೇಡ್ಕರ್ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಅಂಬೇಡ್ಕರ್ ರವರ 134ನೇ ಜಯಂತಿ ಪ್ರಯುಕ್ತ ತಾಲೂಕಿನ ನರಸಾಪುರ ಗ್ರಾಮದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಪ್ರಥಮ ಬಹುಮಾನ ಬೈರತಿ ಬಾಯ್ಸ್, ಎರಡನೇ ಬಹುಮಾನ ಚೆನೈ ಎ ಎಫ್ ಸಿ, ಮೂರನೇ ಬಹುಮಾನ ಡೇಂಜರ್ ಬಾಯ್ಸ್, ಹಾಗೂ ನಾಲ್ಕನೇ ಬಹುಮಾನ ಪಾಂಡಿಚೇರಿ ಚಿನ್ನ ಫ್ರೆಂಡ್ಸ್ ಪಡೆದುಕೊಂಡರು
ಇದೇ ಸಂದರ್ಭದಲ್ಲಿ ಅಖಿಲ ಭಾರತ ಡಾ ಬಿ ಆರ್ ಅಂಬೇಡ್ಕರ್ ಯುವ ಬ್ರಿಗೇಡ್ ವತಿಯಿಂದ ಆಯೋಜಿಸಿದ್ದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ 134ನೇ ಜಯಂತಿಯ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಡಿ ಸಿ ಪಿ ದೇವರಾಜ್ ರವರು ಗ್ರಾಮೀಣ ಭಾಗದ ಕ್ರೀಡಾ ಪಟುಗಳಲ್ಲಿನ ಪ್ರತಿಭೆಯನ್ನು ಹೊರ ತರಲು ವಾಲಿಬಾಲ್ ಅಂತಹ ಟೂರ್ನಿಗಳು ಹೆಚ್ಚು ಹೆಚ್ಚು ಸಹಕಾರಿಯಾಗಿವೆ. ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತಲ್ಲ ಅದು ಸತತ ಪ್ರಯತ್ನ ಪಟ್ಟರೆ ಜಯ ಸಿಗುತ್ತದೆ ಎಂದು ಅವರು ತಿಳಿಸಿದರು.
ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಭಾರತ ತನ್ನದೇ ಆಗಿರುವ ಛಾಪನ್ನು ಮೂಡಿಸುತ್ತಾ ಬಂದಿದೆ. ಕ್ರಿಕೆಟ್, ಬ್ಯಾಡ್ಮಿಂಟನ್, ಹಾಕಿ, ಅತ್ಲೆಟಿಕ್ಸ್, ಬಾಕ್ಸಿಂಗ್ ಸೇರಿದಂತೆ ಇನ್ನೂ ಹಲವಾರು ಕ್ರೀಡಾ ವಿಭಾಗಗಳಲ್ಲಿ ಭಾರತದ ಕ್ರೀಡಾಪಟುಗಳು ಕೆಚ್ಚೆದೆಯ ಪ್ರದರ್ಶನವನ್ನು ನೀಡುವ ಮೂಲಕ ವಿಶ್ವ ಕ್ರೀಡಾಕೂಟಗಳಲ್ಲಿ ಭಾರತದ ತ್ರಿವರ್ಣ ಅರಳುವಂತೆ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಯುವಕರು ಹೆಚ್ಚಿನ ಒಲವು ತೋರಬೇಕು ಇಂದು ನರಸಾಪುರ ಗ್ರಾಮದಲ್ಲಿ ವಾಲಿಬಾಲ್ ಟೂರ್ನಿಯನ್ನು ಅಚ್ಚುಕಟ್ಟಾಗಿ ಆಯೋಜಿಸಿರುವ ಟೂರ್ನಿಯ ಆಯೋಜಕರಿಗೆ ಅಭಿನಂದನೆಗಳು ತಿಳಿಸಿದರು.
ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಗಣ್ಯರಿಗೆ ಕಿರು ಕಾಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕಡಗಟ್ಟೂರು ವಿಜಯ್ ಕುಮಾರ್, ಜಿ ಎಸ್ ಅಮರನಾಥ್, ಯಾದವ ಜನಾಂಗದ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು, ಅವಾರ್ಡ್ ಸಂಸ್ಥೆಯ ಅಧ್ಯಕ್ಷ ಎಸ್ ನಾರಾಯಣಸ್ವಾಮಿ, ಚನ್ನಸಂದ್ರ ಅಂಬರೀಷ್, ಕುರ್ಕಿ ರಾಜೇಶ್ವರಿ, ತಿರುಮಲೇಶ್, ಗ್ರಾಮ ಪಂಚಾಯಿತಿ ಸದಸ್ಯ ಕೆ ಇ ಚಂದ್ರು, ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಆಯೋಜಕರಾದ ಹರೀಶ್, ಪ್ರಕಾಶ್ ಗುಬ್ಬಿ, ಶ್ರೀ ನಾಗ್, ಮುಶೀರ ಖಾನ್, ಜಿಮ್ ಕಿರಣ್, ಮಾರುತಿ ತೆನಾಲಿ, ಎಣ್ಣೆ ಮಂಜು, ಸಿದ್ದಾರ್ಥ್ ಲಟ್ಟು, ಪ್ರಸನ್ನ , ಧನು, ರಾಜೇಂದ್ರ , ಪ್ರವೀಣ್, ಅಪ್ಪಲು, ಅಖಿಲ ಭಾರತ ಡಾ ಬಿ ಆರ್ ಅಂಬೇಡ್ಕರ್ ಯುವ ಬ್ರಿಗೇಡ್ ನ ಪದಾಧಿಕಾರಿಗಳು ಹಾಗೂ ನರಸಾಪುರ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ