ಚುನಾವಣೆಯ ಪ್ರಯುಕ್ತ ಚಿಕ್ಕಮಗಳೂರು ಜಿಲ್ಲಾದ್ಯಂತ ಸತತ 3 ದಿನಗಳ ವರೆಗೆ ಮಧ್ಯ ಮಾರಾಟ ನಿಷೇಧ…!
(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯಲ್ಲಿ ಜೂನ್ 1 ರಿಂದ ಜೂನ್ 3 ರ ವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಯ ಸಲುವಾಗಿ ಮದ್ಯ ಮಾರಾಟವನ್ನು ನಿಷೇದಿಸಲಾಗಿದೆ.
ಜಿಲ್ಲೆಯಲ್ಲಿ ಜೂನ್ 3 ರಂದು ಮತದಾನ ಪ್ರಕ್ರಿಯೆ ಆರಂಭವಾಗಿದ್ದು , ಈ ಸಲುವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜೂನ್ 1 ಶನಿವಾರ ಸಂಜೆ 5 ಗಂಟೆಯಿಂದ ಜೂನ್ 3 ಸೋಮವಾರ ಸಂಜೆ 5 ಗಂಟೆಯವರೆಗೆ ಅಂದರೇ ಸತತ 3 ದಿನಗಳ ವರೆಗೆ.. ಜಿಲ್ಲಾಧಿಕಾರಿ ಹಾಗು ಜಿಲ್ಲಾ ದಂಡಾಧಿಕಾರೀ ಮೀನಾ ನಾಗರಾಜ್ ಆದೇಶದಂತೆ ಎಲ್ಲಾ ರೀತಿಯ ಮದ್ಯ ಮಾರಾಟ ಮತ್ತು ಸಾಗಾಣೆಯನ್ನು ನಿಷೇಧಿಸುವಂತೆ ಸೂಚಿಸಲಾಗಿದೆ.