ಚಲ್ದಿಗಾನಹಳ್ಳಿ ಗ್ರಾಮವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪಣತೊಟ್ಟ ಗ್ರಾಮ ಪಂಚಾಯಿತಿ ಸದಸ್ಯ ಸುಶ್ಮಿತಾ ರಮೇಶ್
(KOLARA): ಕೋಲಾರ : ಗ್ರಾಮದ ಅಭಿವೃದ್ಧಿಗೆ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಆಯ್ಕೆ ಮಾಡ್ತಾರೆ ಅವರು ಆಯ್ಕೆಯಾಗಿ ಗ್ರಾಮ ಪಂಚಾಯತಿ ಸದಸ್ಯರಾಗಿ ತಾವು ತನ್ನ ಕುಟುಂಬ ಶ್ರೀಮಂತರಾಗಿ ಹೋಗುವುದನ್ನು ನಾವು ನೀವುಗಳು ನೋಡಿಯೇ ಇದ್ದೇವೆ ಆದರೆ ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯರು ಮಾತ್ರ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಲ್ದಿಗಾನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಸುಶ್ಮಿತಾ ರಮೇಶ್ ರವರು ಸಾರ್ವಜನಿಕರಿಗಾಗಿ ಗ್ರಾಮದ ಅಭಿವೃದ್ಧಿಗಾಗಿ ಗ್ರಾಮದ ಸ್ವಚ್ಛತೆಗಾಗಿ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವಿಮಲಾ ರವರ ಬಳಿ ಮಂಡಿಯೂರಿ ತಮ್ಮ ಗ್ರಾಮಕ್ಕೆ ಬೇಕಾದ ಅನುದಾನವನ್ನು ತೆಗೆದುಕೊಂಡು ಹೋಗಿ ಗ್ರಾಮವನ್ನು ಅಭಿವೃದ್ಧಿ ಮಾಡುತ್ತಿದ್ದಾರೆ.
ಸುಶ್ಮಿತಾ ರಮೇಶ್ ರವರ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರಿಗೆ ಮಾಡುತ್ತಿರುವ ಅಭಿವೃದ್ಧಿಯನ್ನು ಸಹಿಸದ ಕೆಲವರು ಸೋಶಿಯಲ್ ಮಾಧ್ಯಮದ ಮುಖಾಂತರ ತಮ್ಮ ಗ್ರಾಮಕ್ಕೆ ಯಾವುದೇ ರೀತಿಯಲ್ಲಿ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಸುಳ್ಳು ಸುದ್ದಿಯನ್ನು ಹಬ್ಬಿಸುತಿದ್ದಾರೆ ಇದು ಸತ್ಯಕ್ಕೆ ದೂರವಾದ ಮಾತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು ಕೂಡ ತಮ್ಮ ಗ್ರಾಮಕ್ಕೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ ಗ್ರಾಮದ ಅಭಿವೃದ್ಧಿಯನ್ನು ಸಹಿಸದ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ
ಇದನ್ನ ನೋಡಿದ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಖುದ್ದು ಗ್ರಾಮಕ್ಕೆ ಭೇಟಿಕೊಟ್ಟು ಪರಿಶೀಲಿಸಿದಾಗ ಗ್ರಾಮದ ಮುಖಂಡರು ಗ್ರಾಮದಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ ಗ್ರಾಮ ಪಂಚಾಯಿತಿ ಸದಸ್ಯರಾದ ಸುಶ್ಮಿತಾ ರಮೇಶ್ ಶ್ರೀನಿವಾಸ್ ರೆಡ್ಡಿ ಲಕ್ಷ್ಮಮ್ಮ ರವರು ನಮ್ಮ ಗ್ರಾಮದಲ್ಲಿ ಸಿಸಿ ರಸ್ತೆಗಳು ಕುಡಿಯುವ ನೀರು ಉತ್ತಮ ಚರಂಡಿಯ ವ್ಯವಸ್ಥೆ ಇನ್ನು ಮುಂತಾದ ಯಾವುದೇ ರೀತಿಯ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ ಜೊತೆಗೆ ನಮ್ಮ ಗ್ರಾಮಸ್ಥರು ಎಲ್ಲಾ ಸೇರಿಕೊಂಡು ಕೋಲಾರ ಶಾಸಕರಾದ ಕೊತ್ತೂರು ಜಿ ಮಂಜುನಾಥ್ ಮತ್ತು ಸಂಸದರಾದ ಮಲ್ಲೇಶ್ ಬಾಬು ರವರ ಬಳಿ ಹೋಗಿ ನಮ್ಮ ಗ್ರಾಮದ ಮೂಲಭೂತ ಸೌಕರ್ಯಗಳ ಬಗ್ಗೆ ಮನವಿ ಮಾಡುತ್ತೇವೆ ಇದು ನಮ್ಮ ಹೆಮ್ಮೆ ನಮ್ಮ ಗ್ರಾಮ ಎಂದು ಗ್ರಾಮಸ್ಥರು ಸಂತಸ ಪಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರದ ಡೈರಿ ಗೋಪಾಲಪ್ಪ, ನಾರಾಯಣಸ್ವಾಮಿ, ಮುನಿಯಪ್ಪ, ದೇವರಾಜ, ನಾಗೇಶ್ ಹಾಗೂ ಉಪಸ್ಥಿತರಿದ್ದರು.
ವರದಿ: ವಿಷ್ಣು ಕೋಲಾರ