2 ಸಾವಿರ ಲಂಚ ಪಡೆಯುತ್ತಿದ್ದವೇಳೆ ಲೋಕಾಯುಕ್ತರ ಬಲೆಗೆ ಬಿದ್ದ ಗುಲ್ಲಹಳ್ಳಿ ಗ್ರಾ.ಪಂ.ಕಾರ್ಯದರ್ಶಿ
(KOLARA): ಬಂಗಾರಪೇಟೆ: ಎರಡು ಸಾವಿರ ರೂ.ಗಳ ಲಂಚ ಪಡೆಯುವ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯಲ್ಲಿ 2 ಸಾವಿರ ಲಂಚ ಪಡೆಯುವ ವೇಳೆ ಲೋಕ ಬಲಗೆ ಬಿದ್ದಿದ್ದು, ಗೋವಿಂದಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಪಂಚಾಯಿತಿ ಕಾರ್ಯದರ್ಶಿಯಾಗಿದ್ದಾನೆ, ಈತ ಇ-ಸ್ವತ್ತು ಮಾಡಿಕೊಡಲು 5 ಸಾವಿರ ಬೇಡಿಕೆ ಇಟ್ಟಿದ್ದು, ಇಂದು 2 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ತಾಲ್ಲೂಕಿನ ಗುಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದಾರೆ. ಇನ್ನೂ ಗುಲ್ಲಹಳ್ಳಿ ಗ್ರಾಮದ ಮುನಿಯಪ್ಪ ಎಂಬುವವರ ಬಳಿ 2 ಸಾವಿರ ಹಣವನ್ನ ಇ. ಸ್ವತ್ತು ಮಾಡಿಕೊಡಲು ಲಂಚ ಪಡೆಯುವ ವೇಳೆ ದಾಳಿ ನಡೆಸಿದ್ದಾರೆ.
ಸಧ್ಯ ಭ್ರಷ್ಟ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪನನ್ನ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.
ವರದಿ: ವಿಷ್ಣು ಕೋಲಾರ