ಮಲೆನಾಡಿನಲ್ಲಿ ಚಿತ್ರೀಕರಣ ಸಂತಸ, ಬಾಳೆಹೊನ್ನೂರು ದುರ್ಗದೇವಿ ಆಶೀರ್ವಾದ ಪಡೆದ ಚಿನ್ನಾರಿ ಮುತ್ತ
(CHIKKAMAGALURU): ಮಲೆನಾಡಿನಲ್ಲಿ ಚಿತ್ರೀಕರಣ ಸಂತಸ
ಬಾಳೆಹೊನ್ನೂರು: ಮಲೆನಾಡಿನ ವಾತಾವರಣದಲ್ಲಿ ಕನ್ನಡ ಸಿನಿಮಾಗಳನ್ನು ಚಿತ್ರೀಕರಣ ಮಾಡಲು ಸಂತಸವಾಗುತ್ತದೆ ಎಂದು ಚಿತ್ರನಟ ವಿಜಯ್ ರಾಘವೇಂದ್ರ ಹೇಳಿದರು.
ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಮಹೋತ್ಸವದಲ್ಲಿ ಶುಕ್ರವಾರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು,
ಕೊಪ್ಪ ತಾಲೂಕಿನ ಬಸರೀಕಟ್ಟೆ ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ರಿಪ್ಪನ್ ಸ್ವಾಮಿ ಎಂಬ ಕನ್ನಡ ಚಲನಚಿತ್ರದ ಚಿತ್ರೀಕರಣವನ್ನು ಕಳೆದ ಕೆಲವು ದಿನಗಳಿಂದ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಪೂಜಾ ಮಹೋತ್ಸವಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿರುವುದು ಸಂತಸ, ಮನಸ್ಸಿಗೆ ನೆಮ್ಮದಿ ತಂದಿದೆ.
ಬಹಳ ದಿನಗಳ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತರು, ಅಭಿಮಾನಿಗಳನ್ನು ನೋಡುವ ಸೌಭಾಗ್ಯ ದೊರೆತಿದೆ. ತಾಯಿ ದುರ್ಗಿ ಪ್ರತಿಯೊಬ್ಬರಿಗೂ ಸುಖಃ, ಶಾಂತಿ, ಐಶ್ವರ್ಯ ನೀಡಲಿ ಎಂಬ ಪ್ರಾರ್ಥನೆಯನ್ನು ಸಲ್ಲಿಸುತ್ತೇನೆ ಎಂದರು.
ಸಮಿತಿಯ ಕಾರ್ಯಾಧ್ಯಕ್ಷ ವೈ.ಮೋಹನ್ಕುಮಾರ್, ಕೋಶಾಧಿಕಾರಿ ಭಾಸ್ಕರ್ ವೆನಿಲ್ಲಾ, ಸಹ ಕೋಶಾಧಿಕಾರಿ ಚೈತನ್ಯ ವೆಂಕಿ, ಕಾನೂನು ಸಲಹೆಗಾರ ಎಚ್.ಎಚ್.ಕೃಷ್ಣಮೂರ್ತಿ, ಚಿತ್ರನಟಿ ಅಶ್ವಿನಿ, ನಿರ್ದೇಶಕ ಕಿಶೋರ್ ಮೂಡಬಿದ್ರೆ, ನಿರ್ಮಾಪಕ ಮಂಜುನಾಥ್ ತುಪ್ಪೂರು ಮತ್ತಿತರರು ಹಾಜರಿದ್ದರು.