ಕಳಸ ಪೊಲೀಸ್ ಠಾಣೆಯ ASI ಹೃದಯಘಾತದಿಂದ ಸಾವು
(ಚಿಕ್ಕಮಗಳೂರು): ಹೃದಯಘಾತದಿಂದ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿನಡೆದಿದೆ. ಕಳಸ ಠಾಣೆಯ ಎಎಸ್ಐ ಜಿ.ಕೆ ಮುರಳೀಧರ್ ಹೃದಯಾಘಾತಕದಿಂದ ಕೊನೆಯುಸಿರೆಳೆದರು.
ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದಾಗ ಬೆಳಗಿನ ಹೊತ್ತು ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ನಗರ ಕಳಸ ಠಾಣೆಯ ಎಎಸ್ಐ ಜಿ.ಕೆ ಮುರಳೀಧರ್ ಅವರ ಅಗಲಿಕೆಗೆ ಜಿಲ್ಲಾ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಇನ್ನು ಜಿ.ಕೆ ಮುರಳೀಧರ್ ಚಿಕ್ಕಮಗಳೂರು ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದು, ಇಲಾಖೆಯ ಕರ್ತವ್ಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದರು