ಕೋಲಾರನ್ಯೂಸ್

ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ

ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ

(KOLARA): ಬಂಗಾರಪೇಟೆ :ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಬಸವರಾಜು ತಿಳಿಸಿದರು.

ತಾಲೂಕಿನ  ಹುಲಿಬೆಲೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ,ಸಹಕಾರ ಸಂಘದಲ್ಲಿ ಸಾಲ ಪಡೆದ ಕೆಲ ಸದಸ್ಯರು ನಿಗದಿತ ಅವಧಿಯಲ್ಲಿ ಮರು ಪಾವತಿಸುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅನೇಕ ಸೌಲಭ್ಯಗಳನ್ನು ನೀಡಿ ಸದಸ್ಯರ ಹಿತಕಾಯುವ ಕೆಲಸ ಮಾಡಲಾಗುತ್ತಿದೆ. ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕಿದೆ ಎಂದು ಹೇಳಿದರು.

ನೆನ್ನೆ ಅಷ್ಟೇ ಸಭೆಯಲ್ಲಿ ಮಾತನಾಡಲಾಗಿದೆ ರೈತರಿಗೆ, ಶ್ರೀ ಶಕ್ತಿ ಸಂಘಗಳಿಗೆ ಸಾಲವನ್ನು ನೀಡಬೇಕೆಂದು ಒತ್ತಾಯ ಮಾಡಿದ್ದೇವೆ, ಮುಂದಿನ ತಿಂಗಳಿನಲ್ಲಿ ಎಲ್ಲಾ ರೈತರಿಗೂ  ಸಾಲವನ್ನು ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಹೊಸ ಸಾಲವನ್ನು ಪಡೆಯಲು ಸದಸ್ಯರು ಸಂಘಕ್ಕೆ ಭೇಟಿ ನೀಡಿ ಯಾವ ಯಾವ ದಾಖಲಾತಿಗಳು ಬೇಕೆಂದು ತಿಳಿದುಕೊಳ್ಳಿ ಎಂದು ಮನವಿ ಮಾಡಿದರು.

ಈಗಾಗಲೇ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹೊಸದಾಗಿ ಸಹಕಾರ ಸಂಘದ  ಬ್ಯಾಂಕಿನ ವ್ಯವಹಾರಗಳೆಲ್ಲವೂ ಸಹ ಗಣಕಯಂತ್ರ ಮೂಲಕ ಮಾಡಬೇಕೆಂದು ಆದೇಶ ಹೊರಡಿಸಿದ್ದಾರೆ. ಅದರಂತೆ ಎಲ್ಲಾ ವ್ಯವಹಾರಗಳನ್ನು ಗಣಕಯಂತ್ರದಲ್ಲಿಯೇ ಮಾಡಲಾಗುತ್ತಿದೆ ಸರಿಯಾದ ಸಮಯಕ್ಕೆ ಸಾಲವನ್ನು ಮರುಪಾವತಿ ಮಾಡಿದರೆ ನಿಮಗೆ ಮತ್ತೆ ಸಾಲ ಪಡೆಯಲು ಅನುಕೂಲವಾಗುತ್ತದೆ ಹಾಗೂ ಷೇರುದಾರರು ಈಗಾಗಲೇ 500 ರೂಪಾಯಿ ಪಾವತಿ ಮಾಡಿದ್ದೀರಿ ಹೊಸದಾಗಿ ಸಾವಿರಾರು ರೂಪಾಯಿಗಳನ್ನು ಪಾವತಿ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಚಂದ್ರಪ್ಪ, ನಿರ್ದೇಶಕರಾದ ವೆಂಕಟೇಶಪ್ಪ, ಲಕ್ಷ್ಮೀನಾರಾಯಣ, ಪ್ರಕಾಶ್ ಗೌಡ,ಮಂಜುನಾಥ್ ಬಿ,ರಾಮಪ್ಪ, ಮಂಜುನಾಥ ಎಂ,ರಾಜಪ್ಪ ಪಾರ್ವತಮ್ಮ, ರಾಮಕ್ಕ,ಅಪ್ಪಲಪ್ಪ ಪಿ ಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್ ಕೆ ನಾರಾಯಣಸ್ವಾಮಿ, ಮುಖಂಡರಾದ ವೆಂಕಟಾಚಲಪತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಗೌಡ, ರಂಗನಾಥ್,ಸುಬ್ರಮಣಿ, ಜಯಸುಧಾ ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code