ಆರೋಗ್ಯ | ಕೃಷಿಚಿಕ್ಕಮಗಳೂರು

ಮಾ.11ಕ್ಕೆ ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ ಉದ್ಘಾಟನೆ

ಮಾ.11ಕ್ಕೆ ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ ಉದ್ಘಾಟನೆ


(CHIKKAMAGALURU): ಆಹ್ವಾನ ಪತ್ರಿಕೆ ಬಿಡುಗಡೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ರವಿಚಂದ್ರ
ಬಾಳೆಹೊನ್ನೂರು: ರಂಭಾಪುರಿ ಪೀಠದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಾ.11ರಂದು ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.11ರ ಮಂಗಳವಾರ ವಿಶೇಷ ಕೃಷಿ ಸಮ್ಮೇಳನ ಹಾಗೂ ಕಾಫಿ, ಅಡಿಕೆ ಬೆಳೆಗಾರರ ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ರವಿಚಂದ್ರ ಎಸ್‌ಟಿಡಿ ತಿಳಿಸಿದ್ದಾರೆ.


ಪಟ್ಟಣದ ಜೇಸಿ ವೃತ್ತದ ಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಸಮ್ಮೇಳನದ ಆಹ್ವಾನ ಪತ್ರಿಕೆ ಹಾಗೂ ಬ್ಯಾನರ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮಾ.11 ರಂದು ಬೆಳಿಗ್ಗೆ 11 ಗಂಟೆಗೆ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಸಾನಿಧ್ಯದಲ್ಲಿ ಸಮ್ಮೇಳನ ಆರಂಭಗೊಳ್ಳಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಶಾಸಕ ಟಿ.ಡಿ.ರಾಜೇಗೌಡ, ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿಕೃಷ್ಣ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್ ದೇವವೃಂದ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.


ಮಧ್ಯಾಹ್ನ 2 ಗಂಟೆಗೆ ಕಾಫಿ ಬೆಳೆಯ ಕುರಿತು ವಿಶೇಷ ಗೋಷ್ಠಿ, ಉಪನ್ಯಾಸ ನಡೆಯಲಿದ್ದು, ಕೆಜಿಎಫ್ ಖಜಾಂಚಿ ಎಂ.ಕೆ.ಸುಂದರೇಶ್, ಕಾಫಿ ಮಂಡಳಿ ಸದಸ್ಯ ಎ.ಜಿ.ದಿವಿನ್‌ರಾಜ್, ಡಾ.ಎಚ್.ಎಸ್.ಕೃಷ್ಣಾನಂದ, ಸಿಸಿಆರ್‌ಐ ಸಂಶೋಧನಾ ನಿರ್ದೇಶಕ ಡಾ.ಸೆಂಥಿಲ್‌ಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಭವಿಷ್ಯದಲ್ಲಿ ಭಾರತೀಯ ಕಾಫಿ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ.

Leave a Reply

Your email address will not be published. Required fields are marked *

Scan the code