ಚಿಕ್ಕಮಗಳೂರುನ್ಯೂಸ್

ಹೆಚ್ಚುತ್ತಿರುವ ಕಾಡುಕೋಣಗಳ ದಾಳಿ..ದಾಳಿಗೆ ಸಿಲುಕಿದ ಕೃಷಿಕ…!

ಹೆಚ್ಚುತ್ತಿರುವ ಕಾಡುಕೋಣಗಳ ದಾಳಿ..ದಾಳಿಗೆ ಸಿಲುಕಿದ ಕೃಷಿಕ…!

(CHIKKAMAGALURU): ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದುರ್ಗದಹಳ್ಳಿಗ್ರಾಮದ ಹಲಗಡ್ಕ ಸಮೀಪ ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

         
ಚಿಕ್ಕಮಗಳೂರು ಭಾಗದಲ್ಲಿ ಕಾಡುಕೋಣಗಳ ಹಾವಳಿ ಮಿತಿಮೀರಿದ್ದು, ಕಳೆದ ಕೆಲ ದಿನಗಳ ಹಿಂದೆ ಜಾವಳಿ ಸಮೀಪದ ಮೂವರ ಮೇಲೆ ಕಾಡುಕೋಣಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಇದೀಗ ರಾಜೇಶ್ ಎಂಬುವವರು ತನ್ನ ಜಮೀನಿನಲ್ಲಿ ಇದ್ದಾಗ ಕಾಡುಕೋಣವೊಂದು ರಾಜೇಶ್ ಮೇಲೆ ದಾಳಿ ನಡೆಸಿದ್ದು, ಕಾಡುಕೋಣ ದಾಳಿಯಿಂದ ರಾಜೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕಾಡುಕೋಣದ ಕೊಂಬಿನಿಂದ ತಿವಿದ ಪರಿಣಾಮ ರಾಜೇಶ್ ಅವರ ತಲೆ, ಹೊಟ್ಟೆ ಮತ್ತು ಕಾಲಿನ ಭಾಗಕ್ಕೆ ತೀವ್ರವಾಗ ಗಾಯವಾಗಿದೆ. ರಾಜೇಶ್ ಕಾಡುಕೋಣದ ಕೊಂಬಿಗೆ ಸಿಲುಕಿ ಕಾಡುಕೋಣ ಸುಮಾರು ದೂರ ಕುಮ್ಮಿನಿಂದ ಎಳೆದು ಇದೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ರಾಜೇಶ್ ಅವರನ್ನು ಸ್ಥಳೀಯರು ಕಳಸ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆಯ ನಂತರ ಮಂಗಳೂರಿನ ಆಸ್ಪತ್ರೆಗೆ
ದಾಖಲಿಸಲಿಸಲಾಗಿದೆ. ಅಲ್ಲಿ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಡುಕೋಣಗಳ ದಾಳಿ ಹೆಚ್ಚಾಗಿರುವುದುದರಿಂದ ಜನರು ಕಾರ್ಮಿಕರು ತಮ್ಮ ಜಮೀನುಗಳಿಗೆ ಹೋಗಲು ಆಗದೆ   ಭಯಪಡುವಂತಹ ಸ್ಥಿತಿ ಉಂಟಾಗಿದೆ.

Leave a Reply

Your email address will not be published. Required fields are marked *

Scan the code